ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದೇ ಪಡೆದು ಮತ್ತೆ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಂತೆ ನೋವು ನಿಮಗಿರದು. ಇಲ್ಲಿ ಆನಂದ ನಿಮಗೆ ಸಿಗಲಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷವು ಅಧಿಕಾರವನ್ನು ಗಳಿಸಲು ಹೋರಾಡುವ ಪಕ್ಷ. ಬಿಜೆಪಿ ದೇಶವನ್ನು ಉಳಿಸಲು ಕಾರ್ಯ ಮಾಡುವ ಪಕ್ಷ ಎಂದು ವಿವರಿಸಿದರು.
ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅತ್ಯುನ್ನತ ಸ್ಥಾನಕ್ಕೆ ಏರಿದೆ. ಮೋದಿಯವರ ಶತಾಯುಷಿ ತಾಯಿಯವರ ನಿಧನ ಆದಾಗ ಮಗನಾಗಿ ಅಂತ್ಯಸಂಸ್ಕಾರವನ್ನು ಮಾಡಿ, ಕೇವಲ ಎರಡೂವರೆ ಗಂಟೆಯಲ್ಲಿ ದೇಶದ ಕಾರ್ಯಕ್ಕೆ ಮತ್ತೆ ಮರಳಿದರು. ಇದು ನಮ್ಮ ನಾಯಕರ ಆದರ್ಶ. ಇಂಥ ಆದರ್ಶಗಳಿಂದ ನಮ್ಮ ಪಕ್ಷ ಬೆಳೆದಿದೆ ಎಂದು ತಿಳಿಸಿದರು.
ನಮ್ಮ ಪಕ್ಷ ಕಾರ್ಯಕರ್ತರ ಆಧರಿತ ಪಕ್ಷ. ಕಾಂಗ್ರೆಸ್ ಪಕ್ಷದಲ್ಲಿ ಮೂಲ ನಿವಾಸಿಗರು ಮತ್ತು ವಲಸಿಗರು ಎಂಬ ಭಾವನೆ, ಕಿತ್ತಾಟ ಇದೆ. ವಲಸಿಗ ಮುಖ್ಯಮಂತ್ರಿ ಆಗಬೇಕೇ ಅಥವಾ ಮೂಲ ನಿವಾಸಿ ಸಿಎಂ ಆಗಬೇಕೇ ಎಂಬ ಚರ್ಚೆ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿದೆ. 5 ವರ್ಷ ಆಡಳಿತ ಮಾಡಿ 2018ರಲ್ಲಿ ಚುನಾವಣೆಗೆ ಹೋದಾಗ ಮುನಿರತ್ನ, ಸುಧಾಕರ್, ಲಕ್ಷ್ಮೀನಾರಾಯಣ ಅಲ್ಲಿದ್ದರು. ಆದರೂ ಪಡೆದುದು ಕೇವಲ 80 ಸೀಟು. ಅವರೆಲ್ಲ ಬಿಜೆಪಿಯಲ್ಲಿದ್ದಾರೆ. ಆದ್ದರಿಂದ ನಮ್ಮ ಸೀಟು ಹೆಚ್ಚಲಿದೆ. ಕಾಂಗ್ರೆಸ್ ಸೀಟು ಇನ್ನಷ್ಟು ಕಡಿಮೆ ಆಗಲಿದೆ ಎಂದರು.
ನಮ್ಮ ಪಕ್ಷ ಹಾಲು ಇದ್ದಂತೆ. ಸ್ವಲ್ಪ ಸಕ್ಕರೆ ಹಾಕಿದಾಗ ಸಕ್ಕರೆ ಕಾಣುವುದಿಲ್ಲ. ಆದರೆ, ಹಾಲು ಸಿಹಿ ಆಗುತ್ತದೆ ಎಂದು ವಿಶ್ಲೇಷಿಸಿದರು.
ಪರಿವಾರವಾದದಿಂದ ಬೇಸತ್ತು ರಾಷ್ಟ್ರವಾದದ ಚಿಂತನೆಯನ್ನು ಅಳವಡಿಸಿಕೊಳ್ಳಲು ಬಂದ ಎಲ್ಲ ನಾಯಕರಿಗೂ ಸ್ವಾಗತ ಎಂದರು. ರಾಜಕಾರಣದಲ್ಲಿ ಪಕ್ಷ ತೊರೆದಾಗ ಆತಂಕ, ಉದ್ವೇಗ ಸಹಜ. ಆದರೆ, ಸ್ವಲ್ಪ ದಿನಗಳ ಬಳಿಕ ನೀವೂ ಬಿಜೆಪಿಯಲ್ಲಿ ಖುಷಿಯಲ್ಲಿ ಇರುವಂತಾಗಲಿದೆ; ಅದು ನಮ್ಮ ಪಕ್ಷದ ವಿಶೇಷತೆ ಎಂದು ನುಡಿದರು.
ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ|| ಕೆ.ಸುಧಾಕರ್ ಅವರು ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಕೋಲಾರ, ಚಿಕ್ಕಬಳ್ಳಾಪುರ, ಗ್ರಾಮಾಂತರ ಮತ್ತಿತರ ಜಿಲ್ಲೆಗಳಿಂದ ಅನೇಕ ಮುಖಂಡರು ಬಿಜೆಪಿ ಸೇರುತ್ತಿರುವುದು ಚುನಾವಣಾ ಫಲಿತಾಂಶದ ದಿಕ್ಸೂಚಿ ಎಂದು ವಿಶ್ಲೇಷಿಸಿದರು.
ಸೋತ ಕಡೆಗಳಲ್ಲಿ ಸೋಲಿನ ವಿಶ್ಲೇಷಣೆ ಮಾಡಬೇಕು. ಗೆಲ್ಲಲು ಸಂಘಟನೆಯನ್ನು ಬಲಪಡಿಸಬೇಕಿದೆ. ಮೋದಿಜಿ ಅವರು ಕೊಟ್ಟ ರೈತ ಸಮ್ಮಾನ್ ಸೇರಿ ಅನೇಕ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ನಾವು ಜನರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.
ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ಮಾತನಾಡಿ, ಬಿಜೆಪಿಯಲ್ಲಿ ಪ್ರೀತಿ ಮತ್ತು ಅಭಿಮಾನ ಇದೆ. ಕಲ್ಮಷ ಇಲ್ಲದೆ ನಮ್ಮವರು ಎಂದು ಆದರಿಸುತ್ತಾರೆ. ಅದು ಬೆಲೆ ಕಟ್ಟಲಾಗದ ವಿಷಯ ಎಂದು ನುಡಿದರು.
ಕಾಂಗ್ರೆಸ್ ಮುಖಂಡರು ಗೆಲ್ಲುವ ಮಾತನಾಡುತ್ತಾರೆ. 5 ವರ್ಷ ಅಧಿಕಾರ ನಡೆಸಿದ್ದ ಸಿದ್ದರಾಮಯ್ಯ ಅಧಿಕಾರ ಪಡೆಯಲಾಗಲಿಲ್ಲ. ಸಮ್ಮಿಶ್ರ ಸರಕಾg ರಚನೆಯ ಸ್ವಯಂಕೃತ ಅಪರಾಧ ಮಾಡಿದ್ದು, ಅದಕ್ಕೆ ಕ್ಷಮೆ ಇಲ್ಲ. ಕಾಂಗ್ರೆಸ್ ಮತ್ತೆ ಬಲಹೀನವಾಗಿದೆ. ಅದು ಸರಕಾರ ಮಾಡಲು ಅಸಾಧ್ಯ. 60ಕ್ಕಿಂತ ಹೆಚ್ಚು ಸೀಟನ್ನು ಕಾಂಗ್ರೆಸ್ ಗೆಲ್ಲಲಾಗದು ಎಂದು ತಿಳಿಸಿದರು. ಬಿಜೆಪಿ ಮತ್ತೆ ಸರಕಾರ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.