ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ದೇಶದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿ ಆರ್ ಕೇಶವನ್ ಅವರು ಇಂದು ಬೆಳಿಗ್ಗೆ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು ಪಕ್ಷ ತೊರೆಯಲು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.
ಇನ್ನು ಮುಂದೆ ಪಕ್ಷದೊಂದಿಗೆ ಗುರುತಿಸಿಕೊಳ್ಳುವುದಿಲ್ಲ ಎಂದು ಕೇಶವನ್ ಅವರು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಅವರು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಜವಾಬ್ದಾರಿಯನ್ನು ಅವರು ಇತ್ತೀಚಿಗೆ ನಿರಾಕರಿಸಿದ್ದರು ಮತ್ತು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದರಿಂದ ದೂರವಿದ್ದರು.
“ಎರಡು ದಶಕಗಳಿಂದ ಪಕ್ಷಕ್ಕಾಗಿ ನನ್ನನ್ನು ಸಮರ್ಪಣಾಭಾವದಿಂದ ಕೆಲಸ ಮಾಡುವಂತೆ ಮಾಡಿದ ಆ ಮೌಲ್ಯಗಳ ಯಾವುದೇ ಕುರುಹುಗಳು ಇತ್ತೀಚಿಗೆ ನನಗೆ ಪಕ್ಷದಲ್ಲಿ ಕಾಣಸಿಗುತ್ತಿಲ್ಲ ಎಂದು ಹೇಳಲು ನನಗೆ ನಿಜವಾಗಿಯೂ ದುಃಖವಾಗುತ್ತಿದೆ. ಪಕ್ಷ ಹೇಳಿದ್ದಕ್ಕೆ ಬದ್ಧನಾಗಿರುತ್ತೇವೆ ಎಂದು ಹೇಳಲು ನಾನು ಸಿದ್ಧನಿಲ್ಲ. ಅದಕ್ಕಾಗಿಯೇ ನಾನು ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಯನ್ನು ನಿರಾಕರಿಸಿದ್ದೆ ಮತ್ತು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದರಿಂದ ದೂರವಿದ್ದೆ” ಎಂದಿದ್ದಾರೆ.
Attached herewith is my Letter of Resignation from the Indian National Congress. Jai Hind!@TamilTheHindu @dinamalarweb @dinathanthi @DinakaranNews @maalaimalar @PTTVOnlineNews @ThanthiTV @sunnewstamil @news7tamil @polimernews @News18TamilNadu @Kalaignarnews @JagranNews @lokmat pic.twitter.com/0QVlQ5ymIY
— C.R.Kesavan (@crkesavan) February 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.