ಶ್ರೀನಗರ: ಭಾರೀ ಹಿಮಪಾತದ ನಡುವೆ ಜಮ್ಮು ಮತ್ತು ಕಾಶ್ಮೀರ ಮಕ್ಕಳಿಗೆ ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಹೀಗಾಗಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಪ್ರಯತ್ನದಲ್ಲಿ ಭಾರತೀಯ ಸೇನೆಯು ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆಯೋಜಿಸಿದೆ.
ಚಳಿಗಾಲದ ರಜೆಯಿಂದಾಗಿ ಕಾಶ್ಮೀರಿ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೋನಿಯಾರ್ನಲ್ಲಿರುವ ಭಾರತೀಯ ಸೇನೆಯ ಸೈನಿಕರು ದೂರದ ಹಳ್ಳಿಗಳಲ್ಲಿ ಸಣ್ಣ ಮಕ್ಕಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಿಳಿದುಕೊಂಡು ಅವರಿಗೆ ತರಗತಿಗಳನ್ನು ಆಯೋಜಿಸುತ್ತಿದ್ದಾರೆ.
ಈ ಮಕ್ಕಳಿಗೆ ಶಿಕ್ಷಣ ಒದಗಿಸಲು ಭಾರತೀಯ ಸೇನೆಯು ಶಿಕ್ಷಕರನ್ನು ಒದಗಿಸಿದೆ. ಹೀಗಾಗಿ ಈಗ ಬಹುಪಾಲು ಮಕ್ಕಳು, ಈ ದೂರದ ಹಳ್ಳಿಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರೆಸುತ್ತಿದ್ದಾರೆ. ಪ್ರಸ್ತುತ, ಸುಮಾರು 300 ಮಕ್ಕಳು ಈ ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಾರತೀಯ ಸೇನೆಯು ಈ ಮಕ್ಕಳಿಗೆ ಉಚಿತ ಸ್ಟೇಷನರಿ ವಸ್ತುಗಳನ್ನು ಕೂಡ ವಿತರಿಸುತ್ತಿದ್ದಾರೆ. ಹೆಚ್ಚಿನ ಮಕ್ಕಳು ಬಡತನದಿಂದ ಬಳಲುತ್ತಿರುವ ಕಾರಣ ಸೇನೆಯ ಈ ಕ್ರಮ ಸಾಕಷ್ಟು ಪ್ರಯೋಜನ ನೀಡುತ್ತಿದೆ.
ಭಾರತೀಯ ಸೇನೆಯ ಪ್ರಯತ್ನಗಳನ್ನು ಶ್ಲಾಘಿಸುತ್ತಿರುವ ಸ್ಥಳೀಯರು ಈ ತರಗತಿಗಳು ಮಕ್ಕಳಿಗೆ ಮುಂದೆ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.