ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಹೊಂದಾಣಿಕೆಯ ರಾಜಕಾರಣಕ್ಕೆ ಮುಕ್ತಿ ಹಾಕಲಿದ್ದೇವೆ. ಅಪ್ಪ ಮಕ್ಕಳ ಪಕ್ಷ, ಅಪ್ಪ ಮಗಳ ಪಕ್ಷವನ್ನು ಸೋಲಿಸಲು ಸಂಕಲ್ಪ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
“ಬಿಟಿಎಂ ಲೇಔಟ್ನ 2ನೇ ಹಂತದ ಸ್ವಾಮಿ ವಿವೇಕಾನಂದ ಆಟದ ಮೈದಾನ”ದಲ್ಲಿ ಇಂದು ಬಿಜೆಪಿ ಪ್ರಗತಿ ರಥದ ಉದ್ಘಾಟನಾ ಕಾರ್ಯಕ್ರಮದಲ್ಲಿ, 135 ಎಲ್ಇಡಿ ಪ್ರಗತಿ ರಥಗಳು 224 ಕ್ಷೇತ್ರಗಳಲ್ಲೂ ಸಂಚರಿಸಲಿವೆ ಎಂದು ತಿಳಿಸಿದರು.
ಯಡಿಯೂರಪ್ಪ- ಬೊಮ್ಮಾಯಿ ಸರಕಾರಗಳು ಮಾಡಿದ ಅಭಿವೃದ್ಧಿಪರ ಯೋಜನೆಯನ್ನು ಪ್ರಶಂಸಿಸಿದರು. ರೈತ ವಿದ್ಯಾನಿಧಿ ಜಾರಿ ಮಾಡಿದ್ದಕ್ಕೆ ಮೆಚ್ಚುಗೆ ಸೂಚಿಸಿದರು. ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿದರು.
ವಿಮಾನನಿಲ್ದಾಣ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗವಾಗಿ ನಡೆದಿದೆ. ಅದ್ಭುತವಾಗಿ ಪರಿವರ್ತನೆ ಆಗುತ್ತಿದೆ. ಬೆಂಗಳೂರಿನ ಇತಿಹಾಸದಲ್ಲಿ ಅಭಿವೃದ್ಧಿಗಾಗಿ ಗರಿಷ್ಠ ಮೊತ್ತವನ್ನು ನಾವು ನೀಡಿದ್ದೇವೆ. ಮೆಟ್ರೋ, ಸಬರ್ಬನ್ ರೈಲಿಗೆ ಹೆಚ್ಚು ಹಣ ಕೊಡಲಾಗಿದೆ. ಉದ್ಯಮಶೀಲತೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಜಿಎಸ್ಟಿ ಸಂಗ್ರಹದಲ್ಲೂ ಮುಂದಿದ್ದೇವೆ ಎಂದು ವಿವರಿಸಿದರು.
ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸುತ್ತೇವೆ. ಕಾಂಗ್ರೆಸ್ನ ಸರಕಾರ ಇದ್ದಾಗ ಆದ ವೈಫಲ್ಯ, 24 ಹಿಂದೂಗಳ ಹತ್ಯೆ, ಅಧಿಕಾರಿಗಳ ಸಾವು, ಭ್ರಷ್ಟಾಚಾರಗಳ ವಿವರವನ್ನು ಜನರಿಗೆ ತಿಳಿಸುತ್ತೇವೆ ಎಂದು ಪ್ರಕಟಿಸಿದರು.
ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ ಬರುವುದು ಖಚಿತ ಎಂದ ಅವರು, ಯುವ ಮೋರ್ಚಾವು ರಥ ಯಶಸ್ಸಿನ ಜವಾಬ್ದಾರಿ ತೆಗೆದುಕೊಂಡಿದೆ ಎಂದು ಮೆಚ್ಚುಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.