ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ಇದು ನನ್ನ ಕೊನೆಯ ಭಾಷಣ ಎಂದು ಉಲ್ಲೇಖಿಸಿದ್ದು, ಈ ಮೂಲಕ ಸಕ್ರಿಯ ರಾಜಕೀಯದಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಆದರೆ ಬಿಜೆಪಿಯನ್ನು ಗೆಲ್ಲಿಸಲು ಕೊನೆಯ ಉಸಿರು ಇರುವವರೆಗೂ ಶ್ರಮಿಸುತ್ತೇನೆ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಏಕೈಕ ಗುರಿಯಾಗಿದೆ ಮತ್ತು ಇದು ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ನನ್ನ ವಿದಾಯ ಭಾಷಣ, ನನಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ.
ಯಡಿಯೂರಪ್ಪ ಅವರು ಜುಲೈ 2019 ರಿಂದ ಜುಲೈ 2021 ರವರೆಗೆ ಕರ್ನಾಟಕದ 19 ನೇ ಸಿಎಂ ಆಗಿ ಸೇವೆ ಸಲ್ಲಿಸಿದರು. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಮತ್ತು ಮೂರು ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಅವರು ಫೆಬ್ರವರಿ 27, 1942 ರಂದು ಕೃಷ್ಣರಾಜಪೇಟೆಯಲ್ಲಿ ಜನಿಸಿದರು. ಅಲ್ಲಿಯೇ ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ಮೊದಲು 1965 ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತರಾಗಿ ನೇಮಕಗೊಂಡರು ಆದರೆ ಬಳಿಕ ಹುದ್ದೆ ತ್ಯಜಿಸಿ ರೈಸ್ ಮಿಲ್ನಲ್ಲಿ ಗುಮಾಸ್ತರಾಗಿ ಸೇರಿದರು.
ನಂತರ, ಅವರು 1967 ರಲ್ಲಿ ಅಕ್ಕಿ ಗಿರಣಿ ಮಾಲೀಕರ ಮಗಳು ಮೈತ್ರಾದೇವಿ ಅವರನ್ನು ವಿವಾಹವಾದರು, ಅವರಿಗೆ ಅರುಣಾದೇವಿ, ಪದ್ಮಾವತಿ ಮತ್ತು ಉಮಾದೇವಿ ಎಂಬ ಮೂವರು ಪುತ್ರಿಯರಿದ್ದಾರೆ ಮತ್ತು ಬಿ.ವೈ. ರಾಘವೇಂದ್ರ, ಮತ್ತು ಬಿ.ವೈ. ವಿಜಯೇಂದ್ರ ಎಂಬ ಪುತ್ರರಿದ್ದಾರೆ.
ಅವರು ಬಸವಣ್ಣನವರ ಅನುಯಾಯಿಯಾಗಿದ್ದು, ಕಾಲೇಜು ದಿನಗಳಿಂದಲೂ ಆರ್ಎಸ್ಎಸ್ನೊಂದಿಗೆ ಸಂಪರ್ಕ ಹೊಂದಿದ್ದರು. ಇಂದಿಗೂ ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿಯ ದಿಗ್ಗಜ ನಾಯಕನಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.