ನವದೆಹಲಿ: 2023-24ರ ಕೇಂದ್ರ ಬಜೆಟ್ನಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಬೆಳಿಗ್ಗೆ “ಯುವ ಶಕ್ತಿಯನ್ನು ಬಳಸಿಕೊಳ್ಳುವುದು – ಕೌಶಲ್ಯ ಮತ್ತು ಶಿಕ್ಷಣ” ಕುರಿತು ಬಜೆಟ್ ನಂತರದ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಈ ಬಜೆಟ್ ಪ್ರಾಯೋಗಿಕ ಮತ್ತು ಉದ್ಯಮ-ಆಧಾರಿತ ಶಿಕ್ಷಣ ವ್ಯವಸ್ಥೆಗೆ ಅಡಿಪಾಯವನ್ನು ನಿರ್ಮಿಸುತ್ತದೆ” ಎಂದು ಹೇಳಿದರು.
ಶಿಕ್ಷಣ ಕ್ಷೇತ್ರವನ್ನು ಬದಲಾಯಿಸಲು ಸರ್ಕಾರ ಪ್ರಯತ್ನಿಸಿದೆ. ಯುವಜನರ ಯೋಗ್ಯತೆ ಮತ್ತು ಮುಂಬರುವ ಸಮಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣವನ್ನು ಮರುನಿರ್ದೇಶಿಸಿದೆ ಎಂದು ಅವರು ಹೇಳಿದರು.
ಹೊಸ ತಂತ್ರಜ್ಞಾನವು ಹೊಸ ಯುಗದ ತರಗತಿ ಕೊಠಡಿಗಳನ್ನು ನಿರ್ಮಿಸಲು ಸಹಾಯ ಮಾಡುತ್ತಿದೆ. ಶಿಕ್ಷಕರ ಪಾತ್ರವು ತರಗತಿಗೆ ಸೀಮಿತವಾಗಿಲ್ಲ ಮತ್ತು ತಂತ್ರಜ್ಞಾನದಿಂದಾಗಿ ಜಗತ್ತು ಬದಲಾಗುತ್ತಿದೆ ಎಂದು ಒತ್ತಿ ಹೇಳಿದರು.
ವಿಶ್ವವಿದ್ಯಾನಿಲಯಗಳನ್ನು ಬಲಪಡಿಸಲು ಭಾರತದಲ್ಲಿ ಇಂದು ಅನೇಕ ಡಿಜಿಟಲ್ ಮತ್ತು ತಾಂತ್ರಿಕ ಉಪಕ್ರಮಗಳಿವೆ ಎಂದ ಅವರು, ಭವಿಷ್ಯದ ಹೆಜ್ಜೆಗಳು ಜ್ಞಾನ, ಕೌಶಲ್ಯ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಪರಿವರ್ತಿಸುತ್ತದೆ ಎಂದು ಅವರು ಹೇಳಿದರು.
ತರಗತಿಯ ಹೊರಗೆ ಯುವಜನತೆಗೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರವು ಇಂಟರ್ನ್ಶಿಪ್ ಮತ್ತು ಅಪ್ರೆಂಟಿಸ್ಶಿಪ್ಗಳ ಮೇಲೆ ಕೇಂದ್ರೀಕರಿಸಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಶಿಷ್ಯವೇತನಗಳು ವಿದ್ಯಾರ್ಥಿಗಳಿಗೆ ಭವಿಷ್ಯ ಸಿದ್ಧಿಸಲು ಸಹಕಾರಿಯಾಗುವುದರಿಂದ ಇಂಟರ್ನ್ಶಿಪ್ ಸಂಸ್ಕೃತಿಯನ್ನು ವಿಸ್ತರಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.