ಮುಂಬಯಿ: ಮಹಾರಾಷ್ಟ್ರದ ಎರಡು ಪ್ರಮುಖ ನಗರಗಳಾದ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ನಗರಗಳ ಮರುನಾಮಕರಣವನ್ನು ಔರಂಗಾಬಾದ್ ಅನ್ನು`ಛತ್ರಪತಿ ಸಂಭಾಜಿನಗರ’ ಎಂದು ಮರುನಾಮಕರಣ ಮಾಡಲಾಗುತ್ತಿದೆ ಮತ್ತು ಒಸ್ಮಾನಾಬಾದ್ ಅನ್ನು `ಧಾರಶಿವ್’ ಎಂದು ಮರುನಾಮಕರಣ ಮಾಡಲಾಗುತ್ತಿದೆ.
ಶುಕ್ರವಾರ ಗೃಹ ವ್ಯವಹಾರಗಳ ಸಚಿವಾಲಯ ಪ್ರಸ್ತಾವನೆಯನ್ನು ಅನುಮೋದಿಸಿದೆ ಮತ್ತು ಮಹಾರಾಷ್ಟ್ರದ ಎರಡೂ ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರವು “ಅಭ್ಯಂತರವಿಲ್ಲ” ಎಂಬುದನ್ನು ಸ್ಪಷ್ಟಪಡಿಸಿದೆ.
ಈ ಸುದ್ದಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ಔರಂಗಾಬಾದ್ ಛತ್ರಪತಿ ಸಂಭಾಜಿನಗರ, ಉಸ್ಮಾನಾಬಾದ್ ಧಾರಾಶಿವ್! ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅನಂತ ಧನ್ಯವಾದಗಳು” ಎಂದಿದ್ದಾರೆ.
➡️ औरंगाबादचे ‘छत्रपती संभाजीनगर’,
➡️ उस्मानाबादचे ‘धाराशिव’ !
राज्य सरकारच्या निर्णयाला केंद्र सरकारची मंजुरी !
मा. पंतप्रधान नरेंद्र मोदीजी आणि केंद्रीय मंत्री मा. अमितभाई शाह यांचे कोटी-कोटी आभार!
मुख्यमंत्री @mieknathshinde जी यांच्या नेतृत्त्वातील सरकारने ‘करुन दाखविले’…! pic.twitter.com/IfXbdFec7r— Devendra Fadnavis (@Dev_Fadnavis) February 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.