ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜಸ್ಥಾನದ ಬಿಕನೇರ್ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದ 14 ನೇ ಆವೃತ್ತಿಯನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಡಾ ಕರ್ಣಿ ಸಿಂಗ್ ಸ್ಟೇಡಿಯಂನಲ್ಲಿ ಮಹೋತ್ಸವ ಆಯೋಜಿಸಲಾಗಿದೆ.
ರಾಜಸ್ಥಾನದಲ್ಲಿ ಮೊದಲ ಬಾರಿಗೆ 9 ದಿನಗಳ ಕಾಲ ಉತ್ಸವವನ್ನು ಆಯೋಜಿಸಲಾಗಿದ್ದು, ಮಾರ್ಚ್ 5ರವರೆಗೆ ನಡೆಯಲಿದೆ.
ಜಾನಪದ ನೃತ್ಯ, ಜಾನಪದ ಸಂಗೀತ, ನಾಟಕ ಮತ್ತು ಸೂಫಿ ಸಂಗೀತದ ಆಧಾರದ ಮೇಲೆ ನಾಡಿನಾದ್ಯಂತದ ಸುಮಾರು ಒಂದು ಸಾವಿರ ಪ್ರಸಿದ್ಧ ಕಲಾವಿದರ ಪ್ರದರ್ಶನಗಳು ಉತ್ಸವದಲ್ಲಿ ನಡೆಯುತ್ತಿವೆ.
ಇದಲ್ಲದೆ, ಮರಳು ಶಿಲ್ಪ, ಕರಕುಶಲ ಮತ್ತು ಇತರ ಕಲೆಗಳನ್ನು ಆಧರಿಸಿದ ಪ್ರದರ್ಶನವನ್ನು ಸಹ ಆಯೋಜಿಸಲಾಗುತ್ತಿದೆ. ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದು, ಪ್ರಚಾರ ಮಾಡುವುದು ಮತ್ತು ಜನಪ್ರಿಯಗೊಳಿಸುವುದು ಉತ್ಸವದ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.