ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಡಗಂಪುರ ಪ್ರದೇಶದಲ್ಲಿ ನಡೆದ ಭೀಕರ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮಂಗಳವಾರ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಮತ್ತು ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರ ಹಂತಕನನ್ನು ಹತ್ಯೆ ಮಾಡಿವೆ. ಹತ್ಯೆಯಾದ ಉಗ್ರನನ್ನು ಪುಲ್ವಾಮಾ ನಿವಾಸಿ ಅಕಿಬ್ ಮುಷ್ತಾಕ್ ಭಟ್ ಎಂದು ಗುರುತಿಸಲಾಗಿದೆ. ಆತ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಎ-ಕೆಟಗರಿ-ಪಟ್ಟಿಯಲ್ಲಿದ್ದ ಭಯೋತ್ಪಾದಕನಾಗಿದ್ದ. ಭಟ್ ಆರಂಭದಲ್ಲಿ ಹಿಜ್ಬ್-ಉಲ್-ಮುಜಾಹಿದ್ದೀನ್ (ಎಚ್ಎಂ) ಭಯೋತ್ಪಾದಕ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದ. ಆದರೆ, ಇತ್ತೀಚೆಗಷ್ಟೇ ಅವನು ಟಿಆರ್ಎಫ್ಗೆ ಸೇರ್ಪಡೆಗೊಂಡಿದ್ದ ಎಂದು ವರದಿಗಳು ತಿಳಿಸಿವೆ.
ಎನ್ಕೌಂಟರ್ನ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡ ಕಾಶ್ಮೀರ ಎಡಿಜಿಪಿ “ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹಂತಕನನ್ನು ಹತ್ಯೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ಇಬ್ಬರು ಸೇನಾ ಯೋಧರ ಪೈಕಿ ಒಬ್ಬರು ಗಾಯಗೊಂಡು ಹುತಾತ್ಮರಾಗಿದ್ದು, ಮತ್ತೊಬ್ಬರು ಸದ್ಯ ಚಿಂತಾಜನಕರಾಗಿದ್ದಾರೆ ಎಂದು ಹೇಳಲಾಗಿದೆ. ಅವರನ್ನು 92 ಬೇಸ್ ಆರ್ಮಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅವಂತಿಪೋರಾ ಎನ್ಕೌಂಟರ್ ವೇಳೆ ಇಬ್ಬರೂ ಯೋಧರಿಗೆ ಗಂಭೀರ ಗಾಯಗಳಾಗಿವೆ. ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದ್ದು, 1-2 ಭಯೋತ್ಪಾದಕರು ಇನ್ನೂ ಈ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ಹೇಳಿವೆ.
ಇಂದು ಕಾಶ್ಮೀರದಲ್ಲಿ ಒಟ್ಟು ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
J&K | An encounter broke out between terrorists and security forces in Awantipora. One terrorist was killed in the encounter.
(Visuals deferred by unspecified time) pic.twitter.com/PifDpmsPOV
— ANI (@ANI) February 28, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.