ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಪುಸ್ತಕ ಮೇಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ವಿಷಯವನ್ನು ಬಿತ್ತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯುನೈಟೆಡ್ ಹಿಂದೂ ಫ್ರಂಟ್ ಆರೋಪಿಸಿದ್ದು, ಕ್ರೈಸ್ತ ಮಿಷನರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ನಕಾರಾತ್ಮಕ ವಿಷಯಗಳ ಮೂಲಕ ಕ್ರಿಶ್ಚಿಯನ್ ಮಿಷನರಿಗಳು ಹಿಂದೂಗಳನ್ನು ಮತಾಂತರಕ್ಕೆ ಸಿದ್ಧಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ. ಇದಲ್ಲದೆ, ಕ್ರೈಸ್ಥ ಮತದ ಬಗೆಗಿ ಪುಸ್ತಕಗಳನ್ನು, ಹಿಂದೂ ವಿರೋಧಿ ಪುಸ್ತಕಗಳನ್ನು ಎಲ್ಲರಿಗೂ ಮಕ್ಕಳಿಗೂ ಕೂಡ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಆರೋಪಿಸಿದೆ.
ಯುನೈಟೆಡ್ ಹಿಂದೂ ಫ್ರಂಟ್ನ ರಾಷ್ಟ್ರೀಯ ಉಪಾಧ್ಯಕ್ಷ ಧರ್ಮೇಂದ್ರ ಬೇಡಿ, ದೆಹಲಿ ಮುಖ್ಯಸ್ಥ ರಾಹುಲ್ ಮಂಚಂದ ಅವರು ಸಂಘಟನೆಯ ಇತರ ಕಾರ್ಯಕರ್ತರೊಂದಿಗೆ ಪುಸ್ತಕ ಮೇಳ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರತಿಭಟನೆಯನ್ನು ನಡೆಸಿದ್ದಾರೆ.
ಇವರ ಪ್ರಕಾರ, ಕ್ರಿಶ್ಚಿಯನ್ ಮಿಷನರಿಗಳಿಗಾಗಿ ಕೆಲಸ ಮಾಡುವ ಜನರು ಹಿಂದೂಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಮತ್ತು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸುವಂತೆ ಜನರಿಗೆ ಪುಸಲಾಯಿಸುತ್ತಿದ್ದಾರೆ.
ಈ ನಡುವೆ, ಕ್ರಿಶ್ಚಿಯನ್ ಮಿಷನರಿಗಳು ಸ್ಥಾಪಿಸಿರುವ ಬುಕ್ ಸ್ಟಾಲ್ಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ. ಕೇಜ್ರಿವಾಲ್ ಸರ್ಕಾರದ ಪ್ರೋತ್ಸಾಹದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಬಹಿರಂಗವಾಗಿ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮತಾಂತರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಪೊಲೀಸರು ಮತ್ತು ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯುನೈಟೆಡ್ ಹಿಂದೂ ಫ್ರಂಟ್ ಆಗ್ರಹಿಸಿದೆ.
यूनाइटेड हिंदू फ्रंट ने ईसाई मिशनरी द्वारा हिंदू धर्म के विरुद्ध दुष्प्रचार करने व आपत्तिजनक सामग्री वितरित करने वालों के विरुद्ध कड़ी कार्यवाही करने की मांग की तथा अपना विरोध प्रदर्शन किया #UHF #Protest #UnitedHinduFront pic.twitter.com/F1CqAanLFp
— United Hindu Front (@UnitedHinduFrnt) March 1, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.