News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಸ್ತುತ ನಡೆಯುತ್ತಿರುವ ಭತ್ತ ಖರೀದಿಯಿಂದ 1 ಕೋಟಿ ರೈತರಿಗೆ ಪ್ರಯೋಜನ

ನವದೆಹಲಿ: 2022-23ರ ಖಾರಿಫ್ ಮಾರ್ಕೆಟಿಂಗ್ ಸೀಸನ್‌ಗಾಗಿ ನಡೆಯುತ್ತಿರುವ ಭತ್ತದ ಖರೀದಿಯಿಂದ ಒಂದು ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.

ಈ ತಿಂಗಳ 1 ರವರೆಗೆ ಸುಮಾರು 713 ಲಕ್ಷ ಮೆಟ್ರಿಕ್ ಟನ್ (ಎಲ್‌ಎಂಟಿ) ಭತ್ತವನ್ನು ಖರೀದಿಸಲಾಗಿದ್ದು, 1 ಲಕ್ಷದ 14 ಸಾವಿರ ಕೋಟಿ ರೂಪಾಯಿಗಳ ಎಂಎಸ್‌ಪಿ ಅನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು, ಅಡೆತಡೆ ಮುಕ್ತ ಖರೀದಿ ಕಾರ್ಯಾಚರಣೆಗಳಿಗೆ ಎಲ್ಲಾ ವ್ಯವಸ್ಥೆಗಳು ಜಾರಿಯಲ್ಲಿವೆ. ಸಂಗ್ರಹಿಸಿದ ಭತ್ತಕ್ಕೆ ಅಕ್ಕಿ ವಿತರಣೆಯೂ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದೆ.

ದೇಶದ ಅಗತ್ಯತೆಗಳನ್ನು ಪೂರೈಸಲು ಪ್ರಸ್ತುತ ಕೇಂದ್ರ ಪೂಲ್‌ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಲಭ್ಯವಿದೆ ಎಂದು ಸಚಿವಾಲಯ ಹೇಳಿದೆ.

ಪ್ರಸಕ್ತ ಹಂಗಾಮಿನ ಖಾರಿಫ್ ಬೆಳೆಯಿಂದ ಸುಮಾರು 766 ಎಲ್‌ಎಂಟಿ ಭತ್ತವನ್ನು ಸಂಗ್ರಹಿಸಲು ಅಂದಾಜಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top