News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಂಜಾಬಿಗೆ 2,430 ಭದ್ರತಾ ಸಿಬ್ಬಂದಿಯನ್ನು ಕಳುಹಿಸಲು ಮುಂದಾದ ಕೇಂದ್ರ

ನವದೆಹಲಿ: ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿ ಅಮೃತಸರದ ಅಜ್ನಾಲಾದಲ್ಲಿ ಪೊಲೀಸ್ ಸಂಕೀರ್ಣಕ್ಕೆ ನುಗ್ಗಿದ ಕೆಲವೇ ದಿನಗಳ ಬಳಿಕ ಗುರುವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಾರ್ಷಿಕ ಹೋಲಾ ಮೊಹಲ್ಲಾ ಹಬ್ಬಕ್ಕೆ ಮುಂಚಿತವಾಗಿ ಪಂಜಾಬ್‌ಗೆ ತಮ್ಮ ಕ್ಷಿಪ್ರ ಕಾರ್ಯಾಚರಣೆಯ ಎಂಟು ಕಂಪನಿಗಳು ಸೇರಿದಂತೆ ಸುಮಾರು 2,430 ಭದ್ರತಾ ಸಿಬ್ಬಂದಿಯನ್ನು ಕಳುಹಿಸಲು ಗೃಹ ವ್ಯವಹಾರಗಳ ಸಚಿವಾಲಯವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಗೆ ಸೂಚಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಸಿಎಂ ಮಾನ್ ಅವರು ಭೇಟಿಯ ಸಮಯದಲ್ಲಿ, ಅಜ್ನಾಲಾ ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ಕೇಂದ್ರ ಸಚಿವ ಶಾ ಅವರಿಗೆ ವಿವರಣೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಭೆಯ ನಂತರ ಪಂಜಾಬಿಯಲ್ಲಿ ಟ್ವೀಟ್ ಮಾಡಿರುವ ಮಾನ್, “ಕಾನೂನು ಮತ್ತು ಸುವ್ಯವಸ್ಥೆಯ ವಿಷಯದಲ್ಲಿ ಕೇಂದ್ರ ಮತ್ತು ಪಂಜಾಬ್ ಒಟ್ಟಿಗೆ ಕೆಲಸ ಮಾಡುತ್ತವೆ. ಅಮಿತ್‌ಶಾ ಅವರೊಂದಿಗಿನ ಸಭೆಯಲ್ಲಿ ನಾವು ಗಡಿಯಲ್ಲಿ ಡ್ರೋನ್‌ಗಳು ಮತ್ತು ಡ್ರಗ್‌ಗಳ ವಿಷಯದ ಬಗ್ಗೆ ಚರ್ಚಿಸಿದ್ದೇವೆ. ಗಡಿಯಲ್ಲಿನ ಮುಳ್ಳುತಂತಿಯನ್ನು ಸ್ಥಳಾಂತರಿಸುವ ವಿಷಯದ ಬಗ್ಗೆಯೂ ಚರ್ಚಿಸಲಾಗಿದೆ. ಪಂಜಾಬ್‌ನ ಸ್ಥಗಿತಗೊಂಡಿರುವ ಗ್ರಾಮೀಣಾಭಿವೃದ್ಧಿ ನಿಧಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಕೇಳಲಾಗಿದೆ” ಎಂದು ಹೇಳಿದ್ದಾರೆ.

ಗುಪ್ತಚರ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಹ ಪಂಜಾಬ್‌ನ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಲು ಈ ವಾರದ ಆರಂಭದಲ್ಲಿ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ, ಅವರು ಪಂಜಾಬ್‌ನಲ್ಲಿನ ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಸಂಧು ಅವರ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top