News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜನೌಷಧಿ ಯೋಜನೆಗೆ ಸಮರ್ಪಿತಗೊಂಡ ರೈಲಿಗೆ ಚಾಲನೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಗೆ ಸಮರ್ಪಿತಗೊಂಡ ರೈಲಿಗೆ ನವದೆಹಲಿಯಿಂದ ಚಾಲನೆ ನೀಡಿದರು.

ಈ ಛತ್ತೀಸ್‌ಗಢ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲು ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿರುವ ಜೆನೆರಿಕ್ ಔಷಧಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜನೌಷಧಿ ಯೋಜನೆಯ ಬ್ರ್ಯಾಂಡಿಂಗ್‌ನೊಂದಿಗೆ ಸಂಚರಿಸಲಿದೆ.

9 ಸಾವಿರಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಲ್ಲಿ ಔಷಧಗಳು ಕೈಗೆಟಕುವ ದರದಲ್ಲಿ ಲಭ್ಯವಿವೆ. ಆರೋಗ್ಯ ಮತ್ತು ರೈಲ್ವೆ ಸಚಿವಾಲಯದ ಪ್ರಕಾರ, ಈ ರೈಲು ಎರಡು ತಿಂಗಳಲ್ಲಿ ನಾಲ್ಕು ರಾಜ್ಯಗಳಿಗಿಂತ ಹೆಚ್ಚು 184 ನಿಲ್ದಾಣಗಳಲ್ಲಿ ಪ್ರಯಾಣಿಸಲಿದೆ.

ಈ ಸಂದರ್ಭದಲ್ಲಿ ಡಾ.ಮನ್ಸುಖ್ ಮಾಂಡವಿಯ ಮಾತನಾಡಿ, ಜನೌಷಧಿ ಕೇಂದ್ರಗಳು ಗುಣಮಟ್ಟದ ಹಾಗೂ ಕೈಗೆಟಕುವ ದರದಲ್ಲಿ ಔಷಧಗಳನ್ನು ನೀಡುತ್ತವೆ. 9 ಸಾವಿರಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸಲು ಕಾರ್ಯನಿರ್ವಹಿಸುತ್ತಿವೆ ಎಂದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೆಟಕುವ ದರದಲ್ಲಿ ಜನರಿಕ್ ಔಷಧಿಗಳ ಪ್ರಚಾರಕ್ಕಾಗಿ ರೈಲ್ವೆ ವಿಶೇಷ ಅಭಿಯಾನವನ್ನು ಸಹ ನಡೆಸುತ್ತಿದೆ ಎಂದು ಹೇಳಿದ ಅವರು, ರೈಲ್ವೆ ಸಚಿವಾಲಯವು ಕೆಲವು ದೊಡ್ಡ ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು ನಿರ್ಧರಿಸಿದೆ, ಇದು ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಿದೆ ಎಂದರು.

ಈ ವರ್ಷದ ಅಂತ್ಯದೊಳಗೆ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಜನೌಷಧಿ ಕೇಂದ್ರದಲ್ಲಿ ದೊರೆಯುವ ಔಷಧಿಗಳು ಬ್ರ್ಯಾಂಡೆಡ್ ಔಷಧಿಗಳ ಬೆಲೆಗಿಂತ ಶೇ.50 ರಿಂದ 90 ರಷ್ಟು ಕಡಿಮೆ ಬೆಲೆಯಲ್ಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top