ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಇತ್ತೀಚೆಗೆ ಅಮೇರಿಕನ್ ಬಾರ್ ಅಸೋಸಿಯೇಷನ್ ಇಂಡಿಯಾ ಕಾನ್ಫರೆನ್ಸ್ 2023 ರಲ್ಲಿ “ಜಾಗತೀಕರಣದ ಯುಗದಲ್ಲಿ ಕಾನೂನು: ಭಾರತ ಮತ್ತು ಪಶ್ಚಿಮದ ಒಮ್ಮುಖ” ವಿಷಯದ ಕುರಿತು ಮಾತನಾಡಿದರು. ಈ ವೇಳೆ ಅವರು ನ್ಯಾಯಾಂಗದಲ್ಲಿ ತಂತ್ರಜ್ಞಾನದ ಬಳಕೆ, ವಕೀಲ ವೃತ್ತಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಹೆಚ್ಚಿನ ಮಹಿಳಾ ನ್ಯಾಯಾಧೀಶರ ಅಗತ್ಯ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದರು.
ಆದರೆ ಅವರು ಪ್ರಸ್ತಾಪಿಸಿದ ಅತ್ಯಂತ ಚಿಂತನಾಶೀಲ ವಿಷಯವೆಂದರೆ ಸಾಮಾಜಿಕ ಮಾಧ್ಯಮದ ಯುಗದಲ್ಲಿ ಸುಳ್ಳು ಸುದ್ದಿಗಳ ಪ್ರಭಾವ, ಸತ್ಯ ಮತ್ತು ಸುಳ್ಳಿನ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಹೇಗೆ ಕಷ್ಟವಾಗುತ್ತಿದೆ ಎಂಬುದು.
“ಸುಳ್ಳು ಸುದ್ದಿಗಳ ಯುಗದಲ್ಲಿ ಸತ್ಯವು ಬಲಿಪಶುವಾಗಿದೆ. ಇಂದು ಜನರು ತಾಳ್ಮೆ ಮತ್ತು ಸಹಿಷ್ಣುತೆಯ ಕೊರತೆಯನ್ನು ಹೊಂದಿದ್ದಾರೆ ಮತ್ತು ತಮ್ಮದೇ ಆದ ದೃಷ್ಟಿಕೋನ ಹೊಂದಿ ಭಿನ್ನವಾದ ದೃಷ್ಟಿಕೋನಗಳನ್ನು ಸ್ವೀಕರಿಸಲು ಇಂದಿನ ಜನ ಸಿದ್ಧರಿಲ್ಲ” ಎಂದು ಸಿಜೆಐ ಹೇಳಿದ್ದಾರೆ.
“ನಾವು ಮಾಡುವ ಪ್ರತಿಯೊಂದು ಸಣ್ಣ ವಿಷಯಕ್ಕೂ ಟ್ರೋಲ್ ಮಾಡುವವರು ಇದ್ದೇ ಇರುತ್ತಾರೆ. ನ್ಯಾಯಾಧೀಶರಾದ ನಾವು ಕೂಡ ಇದಕ್ಕೆ ಹೊರತಾಗಿಲ್ಲ, ನಿಮ್ಮ ದೃಷ್ಟಿಕೋನವನ್ನು ಒಪ್ಪಿಕೊಳ್ಳದ ಯಾರೋ ಒಬ್ಬರಿಂದ ಟ್ರೋಲ್ ಎದುರಿಸುವ ಬೆದರಿಕೆ ಇದ್ದೇ ಇರುತ್ತದೆ” ಎಂದಿದ್ದಾರೆ.
Delhi | When constitution was drafted, our constitution makers possibly had no idea on lines on which humanity will evolve. We didn't possess notions of privacy, there was no internet, social media. We didn't live in world controlled by algorithms: CJI at conference by ABA (3.3) pic.twitter.com/1NUUig3iKw
— ANI (@ANI) March 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.