News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್ ನೀತಿಗಳು ಸಾವಿರಾರು ನಾಗರಿಕರ ಸಾವಿಗೆ ನೇರ ಹೊಣೆಯಾಗಿದೆ: ಭಾರತ

ನವದೆಹಲಿ: “ಯಾವುದೇ ಧಾರ್ಮಿಕ ಅಲ್ಪಸಂಖ್ಯಾತರು ಇಂದು ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ಬದುಕಲು ಅಥವಾ ಅವರ ಧರ್ಮವನ್ನು ಆಚರಿಸಲು ಸಾಧ್ಯವಿಲ್ಲ. ಪಾಕಿಸ್ತಾನದ ನೀತಿಗಳು ವಿಶ್ವದಾದ್ಯಂತ ಸಾವಿರಾರು ನಾಗರಿಕರ ಸಾವಿಗೆ ನೇರ ಹೊಣೆಯಾಗಿದೆ” ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಆರೋಪಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UNHRC) ಪ್ರತಿಕ್ರಿಯಿಸುವ ಹಕ್ಕನ್ನು ಚಲಾಯಿಸಿದ ಭಾರತವು ಪಾಕಿಸ್ತಾನ ಮಾಡಿದ ಆರೋಪಗಳನ್ನು ತಳ್ಳಿಹಾಕಿದೆ. ಅಲ್ಲದೇ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಭಯೋತ್ಪಾದನೆಯ ವಿಷಯಗಳಲ್ಲಿ ಆ ರಾಷ್ಟ್ರವನ್ನು ತರಾಟೆಗೆ ತೆಗೆದುಕೊಂಡಿದೆ

ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಸೀಮಾ ಪೂಜಾನಿ ಮಾತನಾಡಿ, “ಅಹ್ಮದೀಯ ಸಮುದಾಯವು ತಮ್ಮ ನಂಬಿಕೆಯನ್ನು ಆಚರಿಸಲು ಪಾಕಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾಗುತ್ತಲೇ ಇದೆ. ಕ್ರಿಶ್ಚಿಯನ್ ಸಮುದಾಯದ ಪರಿಸ್ಥಿತಿ ಕೂಡ ಅಷ್ಟೇ ಕೆಟ್ಟದಾಗಿದೆ. ಈ ಸಮುದಾಯ ಆಗಾದ ಕ್ರೂರ ಧರ್ಮನಿಂದೆಯ ಕಾನೂನುಗಳಿಗೆ ಗುರಿಯಾಗುತ್ತಿದೆ.  ಸಮುದಾಯದ ಅಪ್ರಾಪ್ತ ಬಾಲಕಿಯರನ್ನು ಇಸ್ಲಾಂಗೆ ಪರಿವರ್ತಿಸಲಾಗುತ್ತದೆ. ಇದಲ್ಲದೆ, ಹಿಂದೂ ಮತ್ತು ಸಿಖ್ ಸಮುದಾಯಗಳು ತಮ್ಮ ಸ್ಥಳಗಳ ಮೇಲೆ ಆಗಾಗ ದಾಳಿಯ ಸಮಸ್ಯೆಗಳನ್ನು ಎದುರಿಸುತ್ತಿವೆ” ಎಂದು ಹೇಳಿಕೆ ತಿಳಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top