News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೇರಳ: ಸುದ್ದಿ ವಾಹಿನಿ ಕಛೇರಿಗೆ ನುಗ್ಗಿ SFI ದಾಂಧಲೆ

ತಿರುವನಂತಪುರಂ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಕಮ್ಯುನಿಸ್ಟ್ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸ್‌ವಾದಿ)ದ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐ ಶುಕ್ರವಾರ ಕೇರಳದ ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿ ಸಿಬ್ಬಂದಿಯನ್ನು ಬೆದರಿಸಿದೆ.

ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನ 30ಕ್ಕೂ ಹೆಚ್ಚು ಕಾರ್ಯಕರ್ತರು ಮಲಯಾಳಂ ಸುದ್ದಿವಾಹಿನಿ ಏಷಿಯಾನೆಟ್ ನ್ಯೂಸ್ ಕಚೇರಿಗೆ ನುಗ್ಗಿದ್ದಾರೆ.

ಸುದ್ದಿ ವಾಹಿನಿ ನೀಡಿದ ದೂರಿನ ಆಧಾರದ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‌ಎಫ್‌ಐ ಕಾರ್ಯಕರ್ತರು ರಾತ್ರಿ 8 ಗಂಟೆ ಸುಮಾರಿಗೆ ಕಚೇರಿಗೆ ನುಗ್ಗಿ ಅದರ ವಿರುದ್ಧ ಘೋಷಣೆಗಳನ್ನು ಕೂಗಿದರು ಎಂದು ಮಲಯಾಳಂ ಸುದ್ದಿವಾಹಿನಿ ತನ್ನ ದೂರಿನಲ್ಲಿ ಆರೋಪಿಸಿದೆ. ಕಾರ್ಯಕರ್ತರು ಭದ್ರತಾ ಸಿಬ್ಬಂದಿಯನ್ನು ತಳ್ಳಿದರು ಮತ್ತು ಸಿಬ್ಬಂದಿಯನ್ನು ಬೆದರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ ಎಂದು  ವರದಿಯಾಗಿದೆ.

ಎಸ್‌ಎಫ್‌ಐ ಕಾರ್ಯಕರ್ತರ ಮೇಲೆ ಭಾರತೀಯ ದಂಡ ಸಂಹಿತೆಯ 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 149 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಕಾರ್ಯಕರ್ತರು ಭದ್ರತಾ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಮತ್ತು ನ್ಯೂಸ್ ಸ್ಟುಡಿಯೊಗೆ ಪ್ರವೇಶಿಸಿ ಕೆಲಸ ನಿಲ್ಲಿಸುವಂತೆ ಬೆದರಿಕೆ ಹಾಕಿದ್ದಾರೆ.

ಎಸ್‌ಎಫ್‌ಐ ಕೃತ್ಯ ಟೀಕಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಕೇರಳ ಸರ್ಕಾರವನ್ನು ಒತ್ತಾಯಿಸಿದೆ.

ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಕೂಡ ಘಟನೆಯನ್ನು ಖಂಡಿಸಿದ್ದು, ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top