News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‌ಯುಪಿ: ಉಮೇಶ್‌ ಪಾಲ್‌ ಹಂತಕನ ಎನ್‌ಕೌಂಟರ್

ನವದೆಹಲಿ: ಕಳೆದ ತಿಂಗಳು ನಡೆದ ಬಿಎಸ್‌ಪಿ ಶಾಸಕನ ಹತ್ಯೆ ಪ್ರಕರಣದ ಸಾಕ್ಷಿಯನ್ನು ಕೊಲೆ ಮಾಡಿದ್ದ ಆರೋಪಿ ವ್ಯಕ್ತಿಯನ್ನು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಇಂದು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್‌ ಮೇಲೆ ಬುಲೆಟ್‌ಗಳನ್ನು ಹಾರಿಸಿದ್ದ ಆರು ಶೂಟರ್‌ಗಳಲ್ಲಿ ಒಬ್ಬನಾದ ಉಸ್ಮಾನ್ ಅನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಉಮೇಶ್‌ ಪಾಲ್ ಹತ್ಯೆಯ ಆಘಾತಕಾರಿ ದೃಶ್ಯಗಳು ವೈರಲ್ ಆಗಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು.ಅಪರಾಧದಲ್ಲಿ ಭಾಗಿಯಾಗಿರುವವರನ್ನು ಸರ್ಕಾರ ಹತ್ತಿಕ್ಕುತ್ತದೆ ಎಂದು ಈ ವೇಳೆ ಯೋಗಿ ಆದಿತ್ಯನಾಥ್‌ ಅವರು ಭರವಸೆ ನೀಡಿದ್ದರು.

ಮುಖ್ಯಮಂತ್ರಿಯವರ ಹೇಳಿಕೆಯನ್ನು ಉಲ್ಲೇಖಿಸಿ, ಬಿಜೆಪಿ ಶಾಸಕ ಮತ್ತು ಮುಖ್ಯಮಂತ್ರಿಗಳ ಮಾಜಿ ಸಲಹೆಗಾರ ಶಲಭ್ ಮಣಿ ತ್ರಿಪಾಠಿ ಅವರು ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ನಾವು ಅವರನ್ನು ಹತ್ತಿಕ್ಕುತ್ತೇವೆ ಎಂದು ಹೇಳಿದ್ದೆವು, ಉಮೇಶ್ ಪಾಲ್ ಮೇಲೆ ಮೊದಲ ಗುಂಡು ಹಾರಿಸಿದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇದೊಂದು ಎನ್ಕೌಂಟರ್” ಎಂದಿದ್ದಾರೆ.

ಪ್ರಯಾಗ್‌ರಾಜ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬದ್ರಿ ವಿಶಾಲ್ ಸಿಂಗ್, ಉಸ್ಮಾನ್ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top