News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಕ್ಕಳಿಂದ ಬೇಸತ್ತು 1.5 ಕೋಟಿ ರೂ ಆಸ್ತಿ ಯುಪಿ ಸರ್ಕಾರಕ್ಕೆ ನೀಡಿದ ವೃದ್ಧ

ಲಕ್ನೋ: ತನ್ನ ಮಕ್ಕಳಿಂದ ಪರಿತ್ಯಕ್ತಗೊಂಡಿದ್ದಕ್ಕೆ ಅಸಮಾಧಾನಗೊಂಡ 85 ವರ್ಷದ ವ್ಯಕ್ತಿಯೊಬ್ಬರು ತಮ್ಮ 1.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ವಿಲ್ ಮಾಡಿದ್ದಾರೆ.

ನಾಥು ಸಿಂಗ್ ಅವರು ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರ. ಅಲ್ಲದೇ ತಮ್ಮ ಮಗ ಮತ್ತು ನಾಲ್ವರು ಪುತ್ರಿಯರನ್ನು ತನ್ನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಿಡಬಾರದು ಎಂದು ಹೇಳಿದ್ದಾರೆ.

ಮುಜಾಫರ್‌ನಗರದ ನಿವಾಸಿ ನಾಥು ಸಿಂಗ್ ಅವರು  1.5 ಕೋಟಿ ರೂಪಾಯಿ ಮೌಲ್ಯದ ಮನೆ ಮತ್ತು ಜಮೀನನ್ನು ಹೊಂದಿದ್ದಾರೆ. ಅವರಿಗೆ ಒಬ್ಬ ಮಗನಿದ್ದಾನೆ, ಅವನು ಶಾಲಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು, ಸಹರಾನ್‌ಪುರದಲ್ಲಿ ವಾಸಿಸುತ್ತಿದ್ದಾರೆ ಮತ್ತು ನಾಲ್ಕು ಹೆಣ್ಣುಮಕ್ಕಳಿಗೆ ವಿವಾಹವಾಗಿದೆರ.

ಪತ್ನಿಯ ಸಾವಿನ ನಂತರ ವೃದ್ಧ ಒಂಟಿ ಜೀವನ ನಡೆಸುತ್ತಿದ್ದರು. ಸುಮಾರು ಏಳು ತಿಂಗಳ ಹಿಂದೆ ಅವರು ತಮ್ಮ ಗ್ರಾಮದ ವೃದ್ಧಾಶ್ರಮಕ್ಕೆ ತೆರಳಿ ಅಲ್ಲಿ ವಾಸಿಸುತ್ತಿದ್ದಾರೆ. ಆದರೆ ಆಶ್ರಮಕ್ಕೂ ಯಾರೊಬ್ಬರೂ ತನ್ನನ್ನು ನೋಡಲು ಬರಲಿಲ್ಲ ಎಂದು ಅವರು ನೊಂದುಕೊಂಡಿದ್ದರು. ಹೀಗಾಗಿ ತಮ್ಮ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಿಲ್ ಮಾಡಿದ್ದಾರೆ. ತಮ್ಮ ಮರಣದ ನಂತರ ತನ್ನ ಜಾಗದಲ್ಲಿ ಆಸ್ಪತ್ರೆ ಅಥವಾ ಶಾಲೆಯನ್ನು ನಿರ್ಮಿಸುವಂತೆ ಕೇಳಿಕೊಂಡಿದ್ದಾರೆ.

“ಈ ವಯಸ್ಸಿನಲ್ಲಿ, ನಾನು ನನ್ನ ಮಗ ಮತ್ತು ಸೊಸೆಯೊಂದಿಗೆ ವಾಸಿಸಬೇಕಾಗಿತ್ತು ಆದರೆ ಅವರು ನನ್ನನ್ನು ಚೆನ್ನಾಗಿ ನಡೆಸಿಕೊಳ್ಳಲಿಲ್ಲ. ಆದ್ದರಿಂದ ನಾನು ಆಸ್ತಿಯನ್ನು ಸರ್ಕಾರಕ್ಕೆ ವರ್ಗಾಯಿಸಲು ಮನಸ್ಸು ಮಾಡಿದೆ” ಎಂದು ನಾಥು ಸಿಂಗ್‌ ಹೇಳಿದ್ದಾರೆ

ಸಂಶೋಧನೆ ಮತ್ತು ಶೈಕ್ಷಣಿಕ ಕಾರ್ಯಗಳಲ್ಲಿ ಬಳಸಲು ತನ್ನ ದೇಹವನ್ನು ದಾನ ಮಾಡಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top