ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಸ್ಸಾಂನ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಮಂತ್ರಿ ಮಂಡಳಿಯೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಭೆಯಲ್ಲಿ ಯಾವೆಲ್ಲಾ ವಿಷಯದ ಬಗ್ಗೆ ಚರ್ಚೆ ನಡೆದಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ.
ಸಭೆಯ ಬಳಿಕ ಟ್ವೀಟ್ ಮಾಡಿರುವ ಶರ್ಮಾ, “ನನ್ನ ಸಂಪುಟ ಸಹೋದ್ಯೋಗಿಗಳಿಗೆ ಇಂದು ಗುವಾಹಟಿಯಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಪಡೆಯುವ ಅವಕಾಶ ಸಿಕ್ಕಿರುವುದು ಒಂದು ಅಪರೂಪದ ಸವಲತ್ತು” ಎಂದಿದ್ದಾರೆ.
ಅಧಿಕಾರಿಗಳ ಪ್ರಕಾರ, ಅಸ್ಸಾಂನ ಕೊಯಿನಾಧೋರಾ ರಾಜ್ಯ ಅತಿಥಿ ಗೃಹದಲ್ಲಿ ನಡೆದ ಸಭೆ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು.
ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆಯ ಕುರಿತು ಚರ್ಚೆ ನಡೆದಿದೆ ಎಂದು ಆರೋಗ್ಯ ಸಚಿವ ಕೇಶಬ್ ಮಹಾಂತ ಹೇಳಿದ್ದಾರೆ, ಆದರೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಿಲ್ಲ.
ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ನೂತನ ಸರ್ಕಾರಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಈಶಾನ್ಯಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ.
A rare privilege for my Cabinet colleagues to have got an opportunity to get blessings and margdarshan of Hon PM Shri @narendramodi Ji, today in Guwahati.
असम के लिये ये एक ऐतिहासिक पल है और अपार गौरव का क्षण है। pic.twitter.com/4x6EtxVz76
— Himanta Biswa Sarma (@himantabiswa) March 7, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.