News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣವಚನ: ಮೋದಿ ಭಾಗಿ

ಅಗರ್ತಲಾ: ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಎರಡನೇ ಬಾರಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಎಂಟು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಭಾಗವಹಿಸಿದ್ದರು. ಅವರ ಜೊತೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಈಶಾನ್ಯ ಯಶಸ್ಸಿನ ಶಿಲ್ಪಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು.

ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದಿನ ಸರ್ಕಾರದಲ್ಲಿದ್ದ ನಾಲ್ವರು ಹೊಸ ಸಚಿವರನ್ನು ಉಳಿಸಿಕೊಳ್ಳಲಾಗಿದೆ. ಅವರೆಂದರೆ ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಶಾಂತಾ ಚಕ್ಮಾ ಮತ್ತು ಸುಶಾಂತ ಚೌಧರಿ. ಮೂರು ಹೊಸ ಮಂತ್ರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಬಿಪ್ಲಬ್ ದೇಬ್ ಅವರ ನಿಕಟವರ್ತಿ ಟಿಂಕು ರಾಯ್, ಬಿಜೆಪಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ಮುಖ್ಯಸ್ಥ ಬಿಕಾಶ್ ದೆಬ್ಬರ್ಮಾ ಮತ್ತು ಸುಧಾಂಶು ದಾಸ್.

ಬಿಜೆಪಿಯ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಈ ಚುನಾವಣೆಯಲ್ಲಿ ಸೋತಿದ್ದು, ಒಂದು ಸಚಿವ ಸ್ಥಾನವನ್ನು ಪಡೆದುಕೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top