News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನದ ಸುಳ್ಳು ಹೇಳಿಕೆಗಳು ಪ್ರತಿಕ್ರಿಯೆಗೆ ಅನರ್ಹ: ವಿಶ್ವಸಂಸ್ಥೆಯಲ್ಲಿ ಭಾರತ

ನವದೆಹಲಿ:  ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಹಿರಂಗ ಚರ್ಚೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣವಾಗಿ ಮುಖಭಂಗವಾಗುವ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದೆ. ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರದ ಪಾಕಿಸ್ಥಾನದ ಹೇಳಿಕೆಗಳು ಪ್ರತಿಕ್ರಿಯೆಗೆ ಅನರ್ಹ ಎಂದಿದೆ.

“ಮಹಿಳೆಯರು, ಶಾಂತಿ ಮತ್ತು ಭದ್ರತೆ: ನಿರ್ಣಯ 1325 ರ 25 ನೇ ವಾರ್ಷಿಕೋತ್ಸವದತ್ತ” ಎಂಬ ಯುಎನ್‌ಎಸ್‌ಸಿ ಮುಕ್ತ ಚರ್ಚೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತ ರಾಯಭಾರಿ ರುಚಿರಾ ಕಾಂಬೋಜ್ ಅವರು, ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಅವರ ಹೇಳಿಕೆಯನ್ನು ಅಲ್ಲಗೆಳೆದಿದ್ದಾರೆ.

ಕಾಶ್ಮೀರದಲ್ಲಿ ಮಹಿಳೆಯರ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ ಎಂದು ಭುಟ್ಟೋ ವಿಶ್ವಸಂಸ್ಥೆಯಲ್ಲಿ ಹೇಳಿದ್ದರು.

“ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರತಿನಿಧಿಯು ಮಾಡಿದ ಕ್ಷುಲ್ಲಕ, ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಟೀಕೆಗಳನ್ನು ನಾನು ತಳ್ಳಿಹಾಕುತ್ತೇನೆ. ನನ್ನ ನಿಯೋಗವು ಇಂತಹ ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರದ ಹೇಳಿಕೆಗಳು ಪ್ರತಿಕ್ರಿಯಿಸಲು ಸಹ ಅನರ್ಹವೆಂದು ಪರಿಗಣಿಸುತ್ತದೆ. ಬದಲಿಗೆ, ನಮ್ಮ ಗಮನ ಸದಾ ಧನಾತ್ಮಕವಾಗಿರುತ್ತದೆ ಮತ್ತು ಮುನ್ನಡೆಯುವತ್ತ ನೋಡುತ್ತಿರುವುದಾಗಿದೆ” ಎಂದು ರುಚಿರಾ ಹೇಳಿದ್ದಾರೆ.

“ಮಹಿಳೆಯರು, ಶಾಂತಿ ಮತ್ತು ಭದ್ರತೆಯ ಕಾರ್ಯಸೂಚಿಯ ಸಂಪೂರ್ಣ ಅನುಷ್ಠಾನವನ್ನು ವೇಗಗೊಳಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಬಲಪಡಿಸಲು ಇಂದಿನ ಚರ್ಚೆ ವಿಮರ್ಶಾತ್ಮಕವಾಗಿ ಮುಖ್ಯವಾಗಿದೆ. ನಾವು ಚರ್ಚೆಯ ವಿಷಯವನ್ನು ಗೌರವಿಸುತ್ತೇವೆ ಮತ್ತು ಸಮಯದ ಮಹತ್ವವನ್ನು ಗುರುತಿಸುತ್ತೇವೆ. ಹಾಗಾಗಿ, ನಮ್ಮ ಗಮನವು ವಿಷಯದ ಮೇಲೆಯೇ ಇರುತ್ತದೆ” ಎಂದು ಹೇಳಿದ್ದಾರೆ.

ಈ ಮೂಲಕ ಮಹಿಳಾ ಕೇಂದ್ರಿತ ಚರ್ಚೆಯಲ್ಲೂ ಕಾಶ್ಮೀರವನ್ನು ಎಳೆದು ತಂದ ಪಾಕಿಸ್ಥಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top