News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಧಾನಿ ದೂರದೃಷ್ಟಿಯಿಂದಾಗಿ ತ್ರಿಪುರಾದ ಭವಿಷ್ಯ ಉಜ್ವಲವಾಗಿದೆ: ಮಾಣಿಕ್‌ ಸಹಾ

ನವದೆಹಲಿ: ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಗೆಲುವು ದೊರೆತಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು, “ಪ್ರಧಾನಿ ಅವರ ದೂರದೃಷ್ಟಿಯಿಂದಾಗಿ ತ್ರಿಪುರದ ಭವಿಷ್ಯ ಉಜ್ವಲವಾಗಿದೆ” ಎಂದು ಹೇಳಿದ್ದಾರೆ.

60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದುಕೊಂಡಿದೆ. ತಿಪ್ರಾ ಮೋತಾ ಪಕ್ಷವು 13 ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನದಲ್ಲಿದ್ದರೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 11 ಸ್ಥಾನಗಳನ್ನು, ಕಾಂಗ್ರೆಸ್ ಮೂರು ಮತ್ತು ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಒಂದು ಸ್ಥಾನವನ್ನು ಪಡೆದುಕೊಂಡಿತು.

“ಪ್ರಧಾನಿಯವರು ತ್ರಿಪುರಾ ಕಡೆಗೆ ನೋಡುತ್ತಿರುವ ರೀತಿ ಮತ್ತು ಇಲ್ಲಿನ ಸಾರ್ವಜನಿಕರಿಗಾಗಿ ಕೆಲಸ ಮಾಡುವ ರೀತಿಯಿಂದ ನಮ್ಮ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸಾಧ್ಯವಾಯಿತು” ಎಂದು ಸಿಎಂ ಸಹಾ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ಹಲವಾರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಂಪರ್ಕವೂ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದೊಂದಿಗೆ ನಮ್ಮ ಸಂಪರ್ಕವು ಬಲಗೊಂಡಿದೆ. ಪ್ರಧಾನಿಯವರ ದೃಷ್ಟಿಯಿಂದಾಗಿ ತ್ರಿಪುರಾ ಉಜ್ವಲವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ನಾವು ಬಯಸುತ್ತೇವೆ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಲು ನಾನು ವಿನಂತಿಸುತ್ತೇನೆ. ನಾವು ಆರೋಗ್ಯ ಕ್ಷೇತ್ರವನ್ನು ಸಹ ಅಭಿವೃದ್ಧಿಪಡಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಮರಳಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top