News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಸ್ಟ್ರೇಲಿಯಾ ಪ್ರಧಾನಿಯೊಂದಿಗೆ ದೇಗುಲ ವಿರೂಪ ಪ್ರಕರಣ ಪ್ರಸ್ತಾಪಿಸಿದ ಮೋದಿ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಹಿಂದೂ ದೇಗುಲಗಳ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್‌ ಅವರೊಂದಿಗೆ ವಿಷಯ ಪ್ರಸ್ತಾಪಿಸಿದ್ದಾರೆ.

ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು  ಮೋದಿ ಇಂದು ಹೇಳಿದ್ದಾರೆ.

“ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿಯ ವರದಿಗಳನ್ನು ನಾನು ನೋಡಿದ್ದೇನೆ. ನಾನು ಇದನ್ನು ಪ್ರಧಾನಿ ಅಲ್ಬನೀಸ್‌ಗೆ ತಿಳಿಸಿದ್ದೇನೆ ಮತ್ತು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮ ಅವರಿಗೆ ಆದ್ಯತೆಯಾಗಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ” ಎಂದು ಪ್ರಧಾನಿ ಮೋದಿ ಜಂಟಿ ಮಾಧ್ಯಮಗೋಷ್ಠಿಯ ಸಂದರ್ಭದಲ್ಲಿ ಹೇಳಿದ್ದಾರೆ.

ಕಳೆದ ವಾರ, ಬ್ರಿಸ್ಬೇನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯದ ಮೇಲೆ ಖಲಿಸ್ತಾನ್ ಪರ ಬೆಂಬಲಿಗರು ದಾಳಿ ನಡೆಸಿದ್ದರು. ಆಸ್ಟ್ರೇಲಿಯಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ ದಾಳಿಯ ನಾಲ್ಕನೇ ಘಟನೆ ಇದಾಗಿದೆ.

ಜನವರಿ 23 ರಂದು, ಮೆಲ್ಬೋರ್ನ್‌ನ ಆಲ್ಬರ್ಟ್ ಪಾರ್ಕ್‌ನಲ್ಲಿರುವ  ಇಸ್ಕಾನ್ ದೇವಾಲಯದ ಗೋಡೆಗಳನ್ನು “ಹಿಂದೂಸ್ತಾನ್ ಮುರ್ದಾಬಾದ್” ಎಂದು ಬರೆದು ವಿರೂಪಗೊಳಿಸಲಾಗಿತ್ತು. ಜನವರಿ 16 ರಂದು, ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶ್ರೀ ಶಿವ ವಿಷ್ಣು ದೇವಾಲಯವನ್ನು ಇದೇ ರೀತಿಯಲ್ಲಿ ವಿರೂಪಗೊಳಿಸಲಾಗಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top