News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ನಿರ್ಣಯ ಅಂಗೀಕರಿಸಿದ ಗುಜರಾತ್‌ ವಿಧಾನಸಭೆ

ಗಾಂಧಿನಗರ: 2002ರ ಗೋಧ್ರಾ ಗಲಭೆ ಕುರಿತ ಸಾಕ್ಷ್ಯಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಷ್ಠೆಯನ್ನು ಹಾಳು ಮಾಡಿದ ಬಿಬಿಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆ ಶುಕ್ರವಾರ ಅಂಗೀಕರಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಗುಜರಾತ್‌ ಸಚಿವ ಹರ್ಷ ಸಂಘವಿ ಅಚರು, ಸಾಕ್ಷ್ಯಚಿತ್ರವು ಪ್ರಧಾನಿ ಮೋದಿ ವಿರುದ್ಧ ಮಾತ್ರವಲ್ಲ, ದೇಶದ 135 ಕೋಟಿ ನಾಗರಿಕರ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟರು, ಅಭಿವೃದ್ಧಿ ಕಾರ್ಯ ಮಾಡಿದರು ಮತ್ತು ದೇಶ ವಿರೋಧಿ ಅಂಶಗಳಿಗೆ ತಕ್ಕ ಉತ್ತರವನ್ನು ನೀಡಿದರು. ಅವರು ಭಾರತವನ್ನು ಜಾಗತಿಕ ಮಟ್ಟದಲ್ಲಿ ಇರಿಸಲು ಶ್ರಮಿಸಿದರು” ಎಂದು ಅವರು ಹೇಳಿದ್ದಾರೆ.

2002 ರ ಗುಜರಾತ್ ಗಲಭೆಗಳನ್ನು ಒಳಗೊಂಡಿರುವ ‘ಇಂಡಿಯಾ: ದಿ ಮೋದಿ ಕೊಶ್ಶನ್’ ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಿತ್ತು. ಇದು ಮೋದಿ ಘನತೆಗೆ ಧಕ್ಕೆ ತರುವ ಅಂಶಗಳನ್ನು ಒಳಗೊಂಡಿತ್ತು.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಸಾಕ್ಷ್ಯಚಿತ್ರವನ್ನು ಪ್ರಚಾರದ ತುಣುಕು ಎಂದು ಬಣ್ಣಿಸಿದೆ, ಇದು ವಸಾಹತುಶಾಹಿ ಮನಸ್ಥಿತಿ ಅನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top