News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯನ್ನು ಉದ್ಘಾಟನೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, “ಮೂಲಸೌಕರ್ಯಗಳ ಅಭಿವೃದ್ಧಿ ಕೇವಲ ಸೌಲಭ್ಯವನ್ನು ಮಾತ್ರ ನೀಡುವುದಿಲ್ಲ, ಉದ್ಯೋಗ ನೀಡುತ್ತದೆ, ಹೂಡಿಕೆ ನೀಡುತ್ತದೆ, ಹಣ ಸಂಪಾದನೆಯ ದಾರಿ ನೀಡುತ್ತದೆ. ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವನ್ನು ಹೆದ್ದಾರಿಗಳಿಗೆ ಸಂಬಂಧಿಸಿದ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದೇವೆ. ಬೆಂಗಳೂರು ಮತ್ತು ಮೈಸೂರು ಎರಡೂ ಕರ್ನಾಟಕದ ಮಹತ್ವಪೂರ್ಣ ನಗರಗಳಾಗಿವೆ. ಇಲ್ಲಿ ಒಂದು ನಗರ ತಂತ್ರಜ್ಞಾನಕ್ಕಾಗಿ ಗುರುತಿಸಲ್ಪಟ್ಟರೆ, ಇನ್ನೊಂದನ್ನು ಪರಂಪರೆಗಾಗಿ ಗುರುತಿಸಲಾಗುತ್ತದೆ. ಈ ಎರಡು ನಗರಗಳನ್ನು ಆಧುನಿಕ ಸೌಕರ್ಯಗಳೊಂದಿಗೆ ಜೋಡಿಸುವುದು ಹಲವು ಆಯಾಮಗಳಿಂದ ಮಹತ್ವಪೂರ್ಣವಾಗಿದೆ” ಎಂದಿದ್ದಾರೆ.

ಈ ಎಕ್ಸ್‌ಪ್ರೆಸ್ ವೇ ರಾಮನಗರ ಮತ್ತು ಮಂಡ್ಯದ ಮೂಲಕ ಹಾದು ಹೋಗುತ್ತದೆ. ಇಲ್ಲಿ ಹಲವು ಐತಿಹಾಸಿಕ ಸ್ಮಾರಕಗಳು ಇವೆ. ಹೀಗಾಗಿ ಈ ಪ್ರದೇಶಗಳಲ್ಲೂ ಪ್ರವಾಸೋದ್ಯಮದ ಅವಕಾಶಗಳು ಹೆಚ್ಚಾಗಲಿವೆ. ಎಕ್ಸ್ಪ್ರೆಸ್ ವೇಯಿಂದಾಗಿ ಮೈಸೂರಿಗೆ ಪ್ರಯಾಣ ಸುಲಭವಾಗುವುಧು ಮಾತ್ರವಲ್ಲ ತಾಯಿ ಕಾವೇರಿಯ ಜನ್ಮಸ್ಥಳ ತಲಕಾವೇರಿಗೂ ಪ್ರಯಾಣ ಸುಲಭವಾಗಲಿದೆ‌ ಎಂದಿದ್ದಾರೆ.

ಮಳೆಗಾಲದ ಸಮಯದಲ್ಲಿ ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಸಂಭವಿಸುವುದನ್ನು ನಾವು ಕಾಣುತ್ತೇವೆ. ಈ ಕಾರಣದಿಂದಾಗಿ ಬೆಂಗಳೂರು ಮತ್ತು ಮಂಗಳೂರು ರಸ್ತೆ ಆಗಾಗ ಬಂದ್ ಆಗುತ್ತದೆ. ಹೀಗಾಗಿ ಬಂದರಿನ ಸಂಪರ್ಕ ಕಡಿದು ಹೋಗುತ್ತದೆ. ಮೈಸೂರು-ಕುಶಾಲನಗರ ಹೆದ್ದಾರಿ ಅಗಲೀಕರಣ ಈ ಸಮಸ್ಯೆಯನ್ನು ದೂರ ಮಾಡಲಿದೆ. ಉತ್ತಮ ಸಂಪರ್ಕದಿಂದಾಗಿ ಈ ಪ್ರದೇಶದಲ್ಲಿ ಕೈಗಾರಿಕೆಯ ವಿಸ್ತರಣೆ ವೇಗವನ್ನು ಪಡೆದುಕೊಳ್ಳುತ್ತದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top