News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೆಲವರು ವಿದೇಶಿ ನೆಲದಲ್ಲಿ ದೇಶವನ್ನು ಅವಮಾನಿಸುತ್ತಿದ್ದಾರೆ: ರಾಹುಲ್‌ ಬಗ್ಗೆ ಯೋಗಿ

ಲಕ್ನೋ: ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರಾಬಲ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೆಲವರು ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುತ್ತಿದ್ದಾರೆ ಎಂದಿದ್ದಾರೆ.

“ಇಂದು ಭಾರತೀಯ ಪ್ರಜಾಪ್ರಭುತ್ವವನ್ನು ಟೀಕಿಸುವವರು ಅವಕಾಶ ಸಿಕ್ಕಾಗ ಪ್ರಜಾಪ್ರಭುತ್ವವನ್ನೇ ಕತ್ತು ಹಿಸುಕಲು ಹೇಸುವುದಿಲ್ಲ” ಎಂದು ಯೋಗಿ ಆದಿತ್ಯನಾಥ್ ಯಾವುದೇ ಹೆಸರನ್ನು ತೆಗೆದುಕೊಳ್ಳದೆ ಹೇಳಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿಶ್ವದಲ್ಲೇ ಪ್ರಸಿದ್ಧಿಗೊಳಿಸುತ್ತಿದ್ದರೆ ಕೆಲವರು ಸರ್ಕಾರವನ್ನು ಅವಮಾನಕ್ಕೀಡು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಇಂತಹ ಜನರು ವಿದೇಶದಲ್ಲಿದ್ದಾಗ ದೇಶವನ್ನು ಟೀಕಿಸುತ್ತಾರೆ,  ಮನೆಯಲ್ಲಿದ್ದಾಗ ಉತ್ತರ ಪ್ರದೇಶವನ್ನು, ಕೇರಳದಲ್ಲಿದ್ದಾಗ ದೆಹಲಿಯನ್ನು ಮತ್ತು ದೆಹಲಿಯಲ್ಲಿದ್ದಾಗ ಕೇರಳವನ್ನು ಟೀಕಿಸುತ್ತಾರೆ. ದೇಶದ ಪ್ರಬಲ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಬಯಸುವ ಮತ್ತು “ಒಡೆದು ಆಳುವ” ಅವರ ಕುಟುಂಬದ ಪರಂಪರೆಯ ರಾಜಕಾರಣವನ್ನು ಹೊಂದಿರುವ ಇಂತಹ ಜನರನ್ನು ಗುರುತಿಸಬೇಕು ಮತ್ತು ಅವರ ದುಷ್ಟತೆಗಳನ್ನು ಯಶಸ್ವಿಯಾಗಲು ಬಿಡಬಾರದು ಎಂದು ಯೋಗಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕಳೆದ ಎಂಟು-ಒಂಬತ್ತು ವರ್ಷಗಳಲ್ಲಿ ದೇಶದ ಸಾಧನೆಗಳು ನವ ಭಾರತವನ್ನು ಪ್ರತಿನಿಧಿಸುತ್ತವೆ. ಮುಂದಿನ ದಿನಗಳಲ್ಲಿ ಭಾರತ ಜಗತ್ತಿಗೆ ದಾರಿ ತೋರಿಸುವ ದೇಶವಾಗಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಜಿ-20 ಅಧ್ಯಕ್ಷ ಸ್ಥಾನವನ್ನು ಪಡೆಯುವುದು ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಹೇಳಿದ ಮುಖ್ಯಮಂತ್ರಿ, ದೇಶದ ಜಾಗತಿಕ ಪ್ರಾಬಲ್ಯವು ಬೆಳೆಯುತ್ತಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top