News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿದೇಶಿ ಶಕ್ತಿಗಳು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕೇ?: ರಾಹುಲ್‌ಗೆ ರಾಜನಾಥ್‌ ಪ್ರಶ್ನಿ

ನವದೆಹಲಿ: ಬ್ರಿಟನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಖಂಡಿಸಿರುವ ಆಡಳಿತರೂಢ ಬಿಜೆಪಿ, ರಾಹುಲ್‌ ಅವರ ಕ್ಷಮೆಯಾಚನೆಗೆ ಆಗ್ರಹಿಸಿದೆ.

ಬಜೆಟ್ ಅಧಿವೇಶನದ ಎರಡನೇ ಭಾಗ ಇಂದು ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿ ಬಿಜೆಪಿ ಸಂಸದರು ರಾಹುಲ್‌ ವಿರುದ್ಧ ಮುಗಿಬಿದ್ದಿದ್ದಾರೆ.  ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಮಾತನಾಡಿ, ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೆಗಳನ್ನು ನೀಡುವ ಮೂಲಕ ಭಾರತವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.

“ಲೋಕಸಭಾ ಸದಸ್ಯರಾಗಿರುವ ರಾಹುಲ್ ಗಾಂಧಿ ಅವರು ಲಂಡನ್‌ಗೆ ಹೋಗಿ ಭಾರತವನ್ನು ದೂಷಿಸಲು ಪ್ರಯತ್ನಿಸಿದ್ದಾರೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯು ಸಂಪೂರ್ಣವಾಗಿ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ವಿದೇಶಿ ಶಕ್ತಿಗಳು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕೇ?” ಎಂದು ಸಿಂಗ್ ಪ್ರಶ್ನಿಸಿದ್ದಾರೆ.

ಈ ಸದನವು ಅವರ ಹೇಳಿಕೆಯನ್ನು ಖಂಡಿಸಬೇಕು ಮತ್ತು ಅವರು ಕ್ಷಮೆಯಾಚಿಸಬೇಕು ಎಂದಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು  ಮಾತನಾಡಿ, “ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ಎಲ್ಲಿತ್ತು ಮತ್ತು ಕೇಂದ್ರ ಸಚಿವ ಸಂಪುಟವು  ಅನುಮೋದಿಸಿದ ಸುಗ್ರೀವಾಜ್ಞೆಯನ್ನು ಹರಿದು ಹಾಕಿದಾಗ ಪ್ರಜಾಪ್ರಭುತ್ವ ಎಲ್ಲಿತ್ತು?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರ ಬೇಡಿಕೆಯನ್ನು ಆಡಳಿತಾರೂಢ ಮೈತ್ರಿಕೂಟದ ಸದಸ್ಯರು ಸಹ ಬೆಂಬಲಿಸಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಮಾತನಾಡಿ, ಭಾರತದಲ್ಲಿ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಬಲಿಷ್ಠವಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಸ್ಪೀಕರ್ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top