News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಜಯ ಸಂಕಲ್ಪ ಯಾತ್ರೆ ಜನಮಾನಸದಲ್ಲಿ ಉಳಿಯಲಿದೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಿಂದ ಪ್ರಾರಂಭವಾಗಿರುವ ವಿಜಯ ಸಂಕಲ್ಪ ಯಾತ್ರೆಯ ನಾಲ್ಕು ಭಾಗಗಳಲ್ಲಿ ಜನರು ಸ್ವಯಂಸ್ಪೂರ್ತಿಯಿಂದ ಸೇರುತ್ತಿರುವುದನ್ನು ನೋಡಿದರೆ ಈ ಯಾತ್ರೆ ಜನಮಾನಸದಲ್ಲಿ ಸದಾ ಉಳಿಯಲಿದೆ ಎಂಬುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು.

ಬಸವನಬಾಗೇವಾಡಿ ಕ್ಷೇತ್ರದ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜನತೆ ಬಿಜೆಪಿ ಸಾಧನೆಗಳನ್ನು ಕಂಡು ಪ್ರತಿಯೊಂದು ಯಾತ್ರೆಯಲ್ಲಿ ಅಭೂತಪೂರ್ವ ಜನರು ಸೇರುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳಲಿಕ್ಕೆ ವಿರೋಧ ಪಕ್ಷದವರಿಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಸೋಲಿನ ಆತಂಕ ಕಾಡುತ್ತಿದೆ ಎಂದು ನುಡಿದರು.

ಈ ವೇಳೆ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕಾಂಗ್ರೆಸ್ ತನ್ನ ಅಧಿಕಾರವಿರುವ ರಾಜ್ಯದಲ್ಲಿ ಹಾಗೂ ಹಿಂದೆ ಅಧಿಕಾರದಲ್ಲಿ ಇದ್ದಾಗ ಏನನ್ನೂ ಮಾಡದೆ ಇಂದು ಜನಸಾಮಾನ್ಯರಿಗೆ ಗ್ಯಾರಂಟಿ ಕಾರ್ಡ್ ಎಂಬ ಹೆಸರಿನಲ್ಲಿ ಸುಳ್ಳು ಪತ್ರ ಹಂಚುತ್ತಿದೆ ಎಂದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಇರಲಾರದ ವಿದ್ಯಾಸಿರಿ, ಕಿಸಾನ ಸಮ್ಮಾನದಂತ ಅನೇಕ ಯೋಜನೆ ಜಾರಿಗೆ ತಂದಿದೆ. ಜಿಲ್ಲೆಯಲ್ಲಿ 196 ಕೋಟಿ ರೂ ರೈಲ್ವೆ ಬ್ರಿಡ್ಜ್ ನಿರ್ಮಾಣ, ಡಬಲಿಂಗ್ ಕಾರ್ಯ, ಜಿಲ್ಲೆಯ ನೀರಾವರಿ ಯೋಜನೆಗೆ ನೀಡಿದ ಸಾವಿರಾರು ಕೋಟಿ ರೂಪಾಯಿಗಳ ಕಾಮಗಾರಿಗಳ ಸಾಧನೆಯ ಕಾರ್ಡ್ ಮುಂದಿಟ್ಟು ಮತದಾರರಲ್ಲಿ ಮತಯಾಚನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳ ಗ್ಯಾರಂಟಿ ನಾವು ಕೊಡುವುದಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ನವರ ಬಾಯಲ್ಲಿ ಆಡುವ ಮಾತಿನ ವಿರುದ್ದ ಎಲ್ಲವೂ ಆಗುತ್ತದೆ. ಮೋದಿಯವರು ನಮ್ಮಪ್ಪನಾನಣೆಗೂ ಪ್ರಧಾನಿ ಆಗಲ್ಲ ಅಂದಿದ್ದರು, ಎಸ್ಸಿ.ಎಸ್ಟಿ ಮೀಸಲಾತಿ ಹೆಚ್ಚಿಸಲು ಸಾಧ್ಯವೇ ಇಲ್ಲ ಎಂದಿದ್ದರು, ಯಡಿಯುರಪ್ಪನವರ ಮುಖ್ಯಮಂತ್ರಿಯಾಗಲ್ಲ, ನಾನೇ ಮತ್ತೆ ಮುಂದಿನ ಮುಖ್ಯಮಂತ್ರಿ ಅಂತ ಹೇಳಿದ್ದ ಸಿದ್ದರಾಮಯ್ಯನವರ ಮಾತುಗಳು ಹುಸಿಯಾಗಿವೆ, ಅವರ ಮಾತಿಗೆ ಯಾವುದೇ ಬೆಲೆ ಇಲ್ಲ. ನಾವು ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲುವುದು ನಿಶ್ಚಿತ. ಬಿಜೆಪಿ ಕಿಚನ್ ಕೋಣೆಯಲ್ಲಿ ಟಿಕೆಟ್ ಘೋಷಣೆ ಮಾಡುವ ಪಕ್ಷವಲ್ಲ. ಡಿಎನ್‍ಎ ಆಧಾರದ ಮೇಲೆ ಸ್ಥಾನಮಾನ ಕೊಡುವುದಿಲ್ಲ. ಯಾರಿಗೆ ಟಿಕೆಟ್ ನೀಡಿದರೂ ಅದು ಸಂಸದೀಯ ಮಂಡಳಿಯಲ್ಲಿ ನಿರ್ಣಯಿಸಲಾಗುತ್ತದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top