News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್‌ನ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್‌ ವಿದೇಶದಲ್ಲಿ ಚರ್ಚಿಸಬೇಕಿದೆ: ರಾಥೋಡ್

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಯುಕೆ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮಾಡಿದ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಿಜೆಪಿ ನಾಯಕ ಮತ್ತು ಲೋಕಸಭಾ ಸದಸ್ಯ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ವಾಗ್ದಾಳಿ ನಡೆಸಿದ್ದಾರೆ.

ಗಾಂಧಿ ದೇಶವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ವಿದೇಶಿ ನೆಲದಲ್ಲಿ ಸುಳ್ಳು ಹೇಳಿದ್ದಾರೆ ಎಂದು ರಾಥೋಡ್ ಆರೋಪಿಸಿದ್ದಾರೆ.

ಭಾರತದಲ್ಲಿನ ಪ್ರಜಾಪ್ರಭುತ್ವವನ್ನು ವಿದೇಶದಲ್ಲಿ ಪ್ರಶ್ನಿಸಿರುವ ರಾಹುಲ್‌ ಅವರನ್ನು ತರಾಟೆಗೆ ತೆಗೆದುಕೊಂಡ ರಾಥೋಡ್‌, ದೇಶದ  ಪ್ರತಿಷ್ಠೆಯನ್ನು ನಿರ್ಮಿಸಲು ಸಾಕಷ್ಟು ಶ್ರಮ ಪಡಬೇಕು. ದೇಶದ ಚಿತ್ರಣ ಉತ್ತಮವಿದ್ದಾಗ ಪ್ರತಿಯೊಬ್ಬ ಭಾರತೀಯನು ಅದರಿಂದ ಪ್ರಯೋಜನಗಳನ್ನು ಪಡೆಯುತ್ತಾನೆ ಮತ್ತು ಪ್ರತಿಯೊಬ್ಬ ಭಾರತೀಯ ವ್ಯವಹಾರವೂ ಪ್ರಯೋಜನಗಳನ್ನು ಪಡೆಯುತ್ತದೆ ಎಂದಿದ್ದಾರೆ.

“ರಾಹುಲ್ ಗಾಂಧಿ ಮತ್ತು ಅವರ ಪಕ್ಷ, ಅವರು ನಮ್ಮ ದೇಶದಲ್ಲಿನ ಸಂಸ್ಥೆಗಳನ್ನು ಗೌರವಿಸುವುದಿಲ್ಲ, ಅವರು ಸಶಸ್ತ್ರ ಪಡೆಗಳನ್ನು ಮತ್ತು ಅವರ ಶೌರ್ಯವನ್ನು ಗೌರವಿಸುವುದಿಲ್ಲ. ಅವರು ಸರ್ಜಿಕಲ್ ಸ್ಟ್ರೈಕ್, ವೈಮಾನಿಕ ದಾಳಿ ಮತ್ತು ನಮ್ಮ ಯೋಧರ ಶೌರ್ಯವನ್ನು ನಿರಂತರವಾಗಿ ಪ್ರಶ್ನಿಸುತ್ತಾರೆ. ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರನ್ನು ಥಳಿಸಲಾಗಿದೆ ಎಂದು ಹೇಳಿದ್ದರು. ಒಬ್ಬ ನಾಯಕ ಈ ರೀತಿ ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿ”  ಎಂದಿದ್ದಾರೆ.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ತಮ್ಮ ರಾಷ್ಟ್ರದ ಬದಲು ಚೀನಾವನ್ನು ನಂಬುತ್ತಿದ್ದಾರೆ. ಅವರು ಚೀನಾದೊಂದಿಗೆ ಹಿಂಬಾಗಿಲಿನಲ್ಲಿ ಮಾತುಕತೆ ನಡೆಸುತ್ತಾರೆ. ಅವರು ಪಾಕಿಸ್ತಾನವನ್ನು ನಂಬುತ್ತಾರೆ ಮತ್ತು ಅವರು ಭಾರತ ಸರ್ಕಾರ ಅಥವಾ ಭಾರತದ ಸಂಸ್ಥೆಗಳು ಅಥವಾ ಸಶಸ್ತ್ರ ಪಡೆಗಳನ್ನು ನಂಬುವುದಿಲ್ಲ ಎಂದಿದ್ದಾರೆ.

“ಕಾಂಗ್ರೆಸ್‌ನಲ್ಲಿ ಶೂನ್ಯ ಪ್ರಜಾಪ್ರಭುತ್ವವಿದೆ. ಅದರ ಬಗ್ಗೆ ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಮಾತನಾಡಬೇಕು ಎಂದು ನಾನು ಭಾವಿಸುತ್ತೇನೆ. ನಾವು ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ಉಳಿಸಬೇಕು ಎಂಬ ಬಗ್ಗೆ ಚಿಂತಿಸಬೇಕು, ಏಕೆಂದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ, ವಾಸ್ತವವಾಗಿ, ಭಾರತ ಇಡೀ ಜಗತ್ತಿನ ಪ್ರಜಾಪ್ರಭುತ್ವದ ತಾಯಿ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top