News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್‌ ಸೋಂಕಿನ ಸ್ಥಳೀಯ ಹರಡುವಿಕೆ: 6 ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ಕೋವಿಡ್-‌19  ಸೋಂಕು ಸ್ಥಳಿಯವಾಗಿ ಹರಡುತ್ತಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿ ಕೇಂದ್ರ ಸರ್ಕಾರ ಆರು ರಾಜ್ಯಗಳಿಗೆ ಪತ್ರ ಬರೆದಿದೆ ಮತ್ತು ಕೋವಿಡ್ -19 ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಲು, ಯಾವಾಗ ಮತ್ತು ಎಲ್ಲಿ ಅಗತ್ಯವೆಂದು ತಿಳಿದು ಕ್ರಮಗಳನ್ನು ಜಾರಿಗೆ ತರಲು ಈ ರಾಜ್ಯಗಳಿಗೆ ಸೂಚಿಸಿದೆ.

ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಈ ಆರು ರಾಜ್ಯಗಳಿಗೆ ಕೋವಿಡ್ -19 ಸೋಂಕಿನ ಸ್ಥಳೀಯ ಹರಡುವಿಕೆಯ ಬಗ್ಗೆ ಜಾಗರೂಕರಾಗಿರುವಂತೆ ಕೇಂದ್ರವು ವಿನಂತಿಸಿದೆ. ವೈರಸ್ ಹರಡುವುದನ್ನು ತಡೆಯಲು ಅಪಾಯದ ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸುವಂತೆ ಮನವಿ ಮಾಡಿದೆ.

“ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ, ಇದು ಸೋಂಕಿನ ಸಂಭವನೀಯ ಸ್ಥಳೀಯ ಹರಡುವಿಕೆಯನ್ನು ಸೂಚಿಸುತ್ತದೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ರಾಜ್ಯವು ಕಟ್ಟುನಿಟ್ಟಾದ ನಿಗಾ ವಹಿಸುವುದು ಮತ್ತು ಸೋಂಕಿನ ಹೊಸ ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿದ್ದರೆ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ” ಎಂದು ಭೂಷಣ್ ಹೇಳಿದ್ದಾರೆ.

ಮಾರ್ಚ್ ಮೊದಲ ಎರಡು ವಾರಗಳಲ್ಲಿ ಮಹಾರಾಷ್ಟ್ರದಲ್ಲಿ ಪ್ರಕರಣಗಳ ಹೆಚ್ಚಳ ಕಂಡುಬಂದಿದೆ. ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ 355 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 15ಕ್ಕೆ ಕೊನೆಗೊಂಡ ವಾರದಲ್ಲಿ 668 ಪ್ರಕರಣಗಳು ದಾಖಲಾಗಿವೆ.

ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ ಗುಜರಾತ್‌ನಲ್ಲಿ ಪ್ರಕರಣಗಳು 105 ರಿಂದ ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 279 ಕ್ಕೆ ಏರಿಕೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತೆಲಂಗಾಣವು ಮಾರ್ಚ್ 8 ಕ್ಕೆ ಕೊನೆಗೊಂಡ ವಾರದಲ್ಲಿ 132 ರಿಂದ ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 267 ಕ್ಕೆ ಸಾಪ್ತಾಹಿಕ ಪ್ರಕರಣಗಳಲ್ಲಿ ಹೆಚ್ಚಳವನ್ನು ವರದಿ ಮಾಡಿದೆ.

ಪತ್ರದ ಪ್ರಕಾರ, ತಮಿಳುನಾಡು ಮಾರ್ಚ್ 8 ಕ್ಕೆ ಕೊನೆಗೊಂಡ ವಾರದಲ್ಲಿ 170 ರಿಂದ ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 258 ಕ್ಕೆ ಪ್ರಕರಣಗಳಲ್ಲಿ ಹೆಚ್ಚಳ ಕಂಡಿದೆ ಎಂದು ವರದಿ ಹೇಳಿದೆ.

ಈ ಅವಧಿಯಲ್ಲಿ ಕೇರಳದ ಪ್ರಕರಣಗಳಲ್ಲಿ 434 ರಿಂದ 579 ಕ್ಕೆ ಏರಿಕೆಯಾಗಿದೆ. ಕರ್ನಾಟಕದ ಪ್ರಕರಣಗಳಲ್ಲಿ 493 ರಿಂದ 604 ಕ್ಕೆ ಏರಿಕೆಯಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top