News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕ್ಷಮೆಯಾಚಿಸದೆ ಸದನದಲ್ಲಿ ರಾಹುಲ್‌ಗೆ ಮಾತನಾಡಲು ಬಿಡುವುದಿಲ್ಲ: ಬಿಜೆಪಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿದೇಶದಲ್ಲಿ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಕೋಲಾಹಲ ಉಂಟಾಗಿದ್ದು, ಉಭಯ ಸದನಗಳನ್ನು ಸತತ ಎರಡನೇ ದಿನಕ್ಕೆ ಮುಂದೂಡಲಾಗಿದೆ.

ಭಾರತೀಯ ಪ್ರಜಾಪ್ರಭುತ್ವದ ಕುರಿತು ವಿದೇಶದಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸುವವರೆಗೆ ಅವರಿಗೆ ಸದನದಲ್ಲಿ ಮಾತನಾಡಲು ಬಿಡುವುದಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿರೋಧ ಪಕ್ಷಗಳು ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ  ಘೋಷಣೆಗಳನ್ನು ಕೂಗುತ್ತಿರುವ ನಡುವೆ ಸಂಸತ್ತಿನ ಎರಡೂ ಸದನಗಳನ್ನು ಇಂದು ಮತ್ತೆ ಮುಂದೂಡಲಾಗಿದೆ.

ಅಲ್ಲದೇ ಸಂಸತ್ತಿನ ಒಳಗೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪಗಳ ಆಡಿಯೊವನ್ನು ಮ್ಯೂಟ್ ಮಾಡಲಾಗಿದೆ. ಇದನ್ನು ಪ್ರಸ್ತಾಪಿಸಿ ಕಾಂಗ್ರೆಸ್ಸಿಗರು ಮತ್ತೆ ವಾಗ್ದಾಳಿ ಆರಂಭಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಪುನರಾವರ್ತಿಸಿದ ಕಾಂಗ್ರೆಸ್ಸಿಗರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಿಂದೆ, ಮೈಕ್ ಆಫ್ ಆಗುತ್ತಿತ್ತು, ಇಂದು ಸದನದ ಕಲಾಪಗಳನ್ನು ಸಹ ಮ್ಯೂಟ್ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ತಮ್ಮ ಹೇಳಿಕೆಗಳ ಕುರಿತು ಗದ್ದಲ ಭುಗಿಲೆದ್ದ ನಂತರ ರಾಹುಲ್ ಗಾಂಧಿಯವರು ಇಂದು ಲೋಕಸಭೆಯಲ್ಲಿ ಎರಡನೇ ಬಾರಿಗೆ ಕಾಣಿಸಿಕೊಂಡರು, ಆದರೆ ಯಾವುದೇ ಚಟುವಟಿಕೆ ನಡೆಯುವ ಮೊದಲೇ ಸದನವನ್ನು ಮುಂದಿನ ವಾರಕ್ಕೆ ಮುಂದೂಡಲಾಯಿತು. ತಮ್ಮ ವಿರುದ್ಧದ ಆರೋಪಗಳಿಗೆ ಸದನದಲ್ಲಿ ಉತ್ತರಿಸಲು ಬಯಸುವುದಾಗಿ ಗಾಂಧಿ ಹೇಳಿದ್ದಾರೆ, ಆದರೆ ಅವರು ಮೊದಲು ಕ್ಷಮೆಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top