News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನವ ಭಾರತಕ್ಕೆ ಮದರಸಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ

ಗುವಾಹಟಿ: ಅಸ್ಸಾಂ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚಲು ಯೋಜಿಸಿರುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಹೇಳಿದ್ದಾರೆ.

ಕರ್ನಾಟಕದ ಬೆಳಗಾವಿಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ  ಶರ್ಮಾ, ತಮ್ಮ ಸರ್ಕಾರವು ಈಗಾಗಲೇ 600 ಮದರಸಾಗಳನ್ನು ಮುಚ್ಚಿದೆ ಮತ್ತು ಉಳಿದೆಲ್ಲವನ್ನೂ ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಹೇಳಿದ್ದಾರೆ.

“ನಮಗೆ ಮದರಸಾಗಳ ಅಗತ್ಯವಿಲ್ಲ, ನಮಗೆ ಇಂಜಿನಿಯರ್‌ಗಳು ಮತ್ತು ವೈದ್ಯರು ಬೇಕು. ನವ ಭಾರತಕ್ಕೆ ಮದರಸಾಗಳ ಬದಲಿಗೆ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಅಗತ್ಯವಿದೆ” ಎಂದು ಹೇಳಿದ್ದಾರೆ.

ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಲು ಅಥವಾ ಈ ಸಂಸ್ಥೆಗಳಲ್ಲಿ ನೀಡುತ್ತಿರುವ ಶಿಕ್ಷಣವನ್ನು ಪರಿಶೀಲಿಸಲು ಅವರು ಈ ಹಿಂದೆ ಸೂಚಿಸಿದ್ದರು. ಅಸ್ಸಾಂನಲ್ಲಿ ಪ್ರಸ್ತುತ 3,000 ನೋಂದಾಯಿತ ಮತ್ತು ನೋಂದಣಿಯಾಗದ ಮದರಸಾಗಳಿವೆ.

2020 ರಲ್ಲಿ, ಅವರು ಎಲ್ಲಾ ಸರ್ಕಾರಿ ಮದರಸಾಗಳನ್ನು ನಿಯಮಿತ ಶಾಲೆಗಳಾಗಿ ಪರಿವರ್ತಿಸಲು ಅನುಕೂಲವಾಗುವಂತಹ ಕಾನೂನನ್ನು ಪರಿಚಯಿಸಿದ್ದರು. ಮದರಸಾಗಳಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಶಿಕ್ಷಣದ ಬಗ್ಗೆ ಸಕಾರಾತ್ಮಕ ಮನೋಭಾವ ಹೊಂದಿರುವ ಬಂಗಾಳಿ ಮುಸ್ಲಿಮರೊಂದಿಗೆ ರಾಜ್ಯ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಮದರಸಾಗಳಲ್ಲಿ ವಿಜ್ಞಾನ ಮತ್ತು ಗಣಿತವನ್ನು ಸಹ ವಿಷಯಗಳಾಗಿ ಕಲಿಸಲಾಗುತ್ತದೆ ಮತ್ತು ಶಿಕ್ಷಣದ ಹಕ್ಕನ್ನು ಗೌರವಿಸಲಾಗುತ್ತದೆ ಮತ್ತು ಶಿಕ್ಷಕರ ಡೇಟಾಬೇಸ್ ಅನ್ನು ನಿರ್ವಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top