ಮಂಗಳೂರು: ಹನ್ನೊಂದನೆ ವರ್ಷದ ಪಿಂಗಾರ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ಥಳೀಯವಾಗಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಅಥವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಕ್ಷೇತ್ರದಲ್ಲಿ ಹೆಸರು ಗಳಿಸಿದವರು, ಸಾಧನೆ ಮಾಡಿದವರು ತಮ್ಮ ಸಾಧನೆಯ ದಾಖಲೆಗಳೊಂದಿಗೆ ಸ್ವತಃ ಅಥವಾ ಇತರರ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ನವೆಂಬರ್ 17ರಂದು ಡಾನ್ಬಾಸ್ಕೋ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಂಗಳೂರಿನ ಧರ್ಮಾಧ್ಯಕ್ಷ ರೈ.ರೇ/ಡಾ/ಅಲೋಶಿಯಸ್ಪಾವ್ಲ್ ಡಿಸೋಜ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 10ರ ಒಳಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಲಾಗಿದೆ.
ಸಂಚಾಲಕರು, ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ 2015
ಬಿಷಪ್ಸ್ ಹೌಸ್ ಚರ್ಚ್ ಬಿಲ್ಡಿಂಗ್, 2ನೇ ಮಹಡಿ
ಕೊಡಿಯಾಲ್ ಬೈಲ್, ದ.ಕ, 575003
ಅಥವಾ Email: pingaara@gmail.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.