News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜಸ್ಥಾನದಲ್ಲಿ 19 ಹೊಸ ಜಿಲ್ಲೆಗಳ ರಚನೆ ಘೋಷಣೆ: ರಾಜಕೀಯ ನಡೆ ಎಂದ ಬಿಜೆಪಿ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗೀಯ ಕೇಂದ್ರಗಳನ್ನು ರಚನೆ ಮಾಡುವುದಾಗಿ ಘೋಷಿಸಿದ್ದಾರೆ.

ನಿನ್ನೆ ವಿಧಾನಸಭೆಯಲ್ಲಿ ಹಣಕಾಸು ಮತ್ತು ಧನಸಹಾಯ ವಿಧೇಯಕ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ, ಮೊದಲ ಹಂತದಲ್ಲಿ ರಕ್ಷಾಬಂಧನ ಹಬ್ಬದ ಸಂದರ್ಭದಲ್ಲಿ 40 ಲಕ್ಷ ಮಹಿಳೆಯರಿಗೆ ಉಚಿತ ಸ್ಮಾರ್ಟ್‌ಫೋನ್‌ಗಳನ್ನು ವಿತರಿಸುವುದು ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದರು.

ಹೊಸ ಜಿಲ್ಲೆಗಳಲ್ಲಿ ಅನುಪ್‌ಗಢ್, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೆಕ್ಡಿ, ಕೊಟ್‌ಪುಟ್ಲಿ-ಬೆಹ್ರೋದ್ ಖೈರ್ತಾಲ್, ನೀಮ್ ಕಾ ಥಾನಾ, ಫಲೋಡಿ, ಸಲುಂಬರ್, ಸಂಚೋರ್ ಮತ್ತು ಶಹಪುರ. ಇದರಿಂದ ರಾಜ್ಯದಲ್ಲಿ 50 ಜಿಲ್ಲೆಗಳಾಗಲಿವೆ. ಬನ್ಸ್ವಾರಾ, ಪಾಲಿ ಮತ್ತು ಸಿಕರ್ ಹೊಸ ವಿಭಾಗೀಯ ಕೇಂದ್ರವಾಗಲಿದೆ.

ರಾಜ್ಯದ ವಿವಿಧ ಪ್ರದೇಶಗಳಲ್ಲಿ 2600 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳು, ಸೇತುವೆಗಳು ಮತ್ತು ಆರ್‌ಒಬಿಗಳ (ರೈಲ್ವೆ ರಸ್ತೆ ಓವರ್ ಬ್ರಿಡ್ಜ್‌ಗಳು) ನಿರ್ಮಾಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಜೈಪುರದ ಗೋವಿಂದ್ ದೇವ್ ಜಿ ಮಂದಿರವನ್ನು ಮಹಾಕಾಲ್ ಉಜ್ಜಯಿನಿಯ ಮಾದರಿಯಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರೊಂದಿಗೆ ತೀರ್ಥರಾಜ್ ಪುಷ್ಕರ ಸಮಗ್ರ ಅಭಿವೃದ್ಧಿಗೆ ಪುಷ್ಕರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿದೆ. ಮುಂಬರುವ ವರ್ಷದಲ್ಲಿ 100 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಡುಂಗರಪುರದ ಬೆನೇಶ್ವರ ಧಾಮದಲ್ಲಿ ಮಾಡಲಾಗುವುದು ಎಂದಿದ್ದಾರೆ.

ಇನ್ನೊಂದೆಡೆ ಚುನಾವಣಾ ವರ್ಷದಲ್ಲಿ ಹೊಸ ಜಿಲ್ಲೆಗಳ ರಚನೆಯನ್ನು ಘೋಷಿಸಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದು ರಾಜಕೀಯ ನಡೆ ಎಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top