ಅಮೃತಸರ: ಭಗವಂತ್ ಮಾನ್ ನೇತೃತ್ವದ ಸರ್ಕಾರ ಸೋಮವಾರ ಪಂಜಾಬ್ನಲ್ಲಿ ಎಲ್ಲಾ ಮೊಬೈಲ್ ಇಂಟರ್ನೆಟ್, ಎಸ್ಎಂಎಸ್ ಸೇವೆಗಳ ಮೇಲಿನ ಸ್ಥಗಿತವನ್ನು ಮತ್ತೆ ವಿಸ್ತರಿಸಿದೆ. ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಖಲಿಸ್ತಾನ್ ಸಹಾನುಭೂತಿದಾರ ಅಮೃತ್ ಪಾಲ್ ಸಿಂಗ್ಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ ತರುವಾಯ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆಯನ್ನು ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ.
ಅಮೃತಪಾಲ್ ಸಿಂಗ್ ಹಿಡಿಯಲು ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಮಾರ್ಚ್ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಪಂಜಾಬ್ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಪಂಜಾಬ್ ಸರ್ಕಾರದ ಅಧಿಕೃತ ಆದೇಶ ತಿಳಿಸಿದೆ.
ರಾಜ್ಯ ಅಧಿಕಾರಿಗಳು ಮೊದಲು ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಶನಿವಾರ ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಿದ್ದರು, ನಂತರ ಅದನ್ನು ಸೋಮವಾರ ಮಧ್ಯಾಹ್ನ 12 ರವರೆಗೆ ವಿಸ್ತರಿಸಲಾಯಿತು. ಇದೀಗ ಮಂಗಳವಾರದವರೆಗೂ ವಿಸ್ತರಿಸಲಾಗಿದೆ.
ಸಮಾಜದ ಕೆಲವು ವರ್ಗಗಳು ರಾಜ್ಯದ ಹಲವಾರು ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿವೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಮು ಉದ್ವಿಗ್ನತೆ, ಮಾನವ ಜೀವ ಮತ್ತು ಆಸ್ತಿಗೆ ಅಪಾಯ, ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಮೂಲಕ ಪಂಜಾಬ್ ರಾಜ್ಯದಲ್ಲಿ ಸಾರ್ವಜನಿಕ ಸುರಕ್ಷತೆ ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಕೆಲವರು ಹವಣಿಸತ್ತಿದ್ದಾರೆ ಎಂದು ಪಂಜಾಬ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
Punjab Police is acting within the law.#AmritpalSingh is still absconding and not yet arrested.
Don't believe the rumours and false news.
Request all citizens to maintain peace & harmony & not panic. pic.twitter.com/BdHRAeVEit
— Punjab Police India (@PunjabPoliceInd) March 19, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.