News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತವಾಸದ ಮೇಲೆ ಖಲಿಸ್ತಾನಿಗಳ ದಾಳಿ: ಯುಎಸ್‌ ಖಂಡನೆ

ನವದೆಹಲಿ: ಪಂಜಾಬ್‌ನಲ್ಲಿ ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಮತ್ತು ಅವನ ಸಹಚರರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಖಲಿಸ್ತಾನ್ ಪರ ಪ್ರತಿಭಟನಾಕಾರರ ಗುಂಪೊಂದು ಸೋಮವಾರ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತವಾಸ ಕಛೇರಿ ಮೇಲೆ ದಾಳಿ ಮಾಡಿ ಹಾನಿ ಮಾಡಿದೆ.

ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ನಗರ ಪೊಲೀಸರು ನಿರ್ಮಿಸಿದ್ದ ತಾತ್ಕಾಲಿಕ ಭದ್ರತಾ ತಡೆಗೋಡೆಗಳನ್ನು ಮುರಿದರು ಮತ್ತು ಕಾನ್ಸುಲೇಟ್ ಆವರಣದಲ್ಲಿ ಎರಡು ಖಲಿಸ್ತಾನಿ ಧ್ವಜಗಳನ್ನು ಸ್ಥಾಪಿಸಿದ್ದಾರೆ. ಬಳಿಕ ಅಧಿಕಾರಿಗಳ ಆ ಧ್ವಜಗಳನ್ನು ಕಿತ್ತೊಗೆದಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಪ್ರತಿಭಟನಾಕಾರರ ಗುಂಪು ಕಾನ್ಸುಲೇಟ್ ಆವರಣವನ್ನು ಪ್ರವೇಶಿಸಿ ಕಬ್ಬಿಣದ ರಾಡ್‌ಗಳಿಂದ ಬಾಗಿಲು ಮತ್ತು ಕಿಟಕಿಗಳಿಗೆ ಹೊಡೆಯಲು ಪ್ರಾರಂಭಿಸಿತು ಎಂದು ವರದಿಗಳು ತಿಳಿಸಿವೆ

ದಾಳಿಯನ್ನು ಯುಎಸ್ ಆಡಳಿತ ಖಂಡಿಸಿದ್ದು, ಈ ವಿಧ್ವಂಸಕತೆಯನ್ನು  ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.

“ನಾವು ಘಟನೆಯನ್ನು ಖಂಡಿತವಾಗಿ ಖಂಡಿಸುತ್ತೇವೆ . ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಸ್ಟೇಟ್ ಡಿಪಾರ್ಟ್ಮೆಂಟ್‌ನ ರಾಜತಾಂತ್ರಿಕ ಭದ್ರತಾ ಸೇವೆಯು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ” ಎಂದು ಶ್ವೇತಭವನದ ಕಾರ್ಯತಂತ್ರದ ಸಂವಹನಗಳ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನೊಂದೆಡೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಖಲಿಸ್ತಾನ್ ಪರ ಪ್ರತಿಭಟನಾಕಾರರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ದಾಳಿ ಮಾಡಿದ ನಂತರ ಭಾರತವು ಯುಎಸ್‌ಗೆ ಕೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top