News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಸ್‌ಸಿ ಮೀಸಲು ಕ್ಷೇತ್ರದಿಂದ ಶಾಸಕನಾದ ಎ ರಾಜಾ ಆಯ್ಕೆ ಅನೂರ್ಜಿತ: ಕೇರಳ ಹೈಕೋರ್ಟ್

ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ ರಾಜಾ ಅವರ ಚುನಾವಣೆಯನ್ನು ಅನೂರ್ಜಿತ ಎಂದು ಕೇರಳ ಹೈಕೋರ್ಟ್ ಸೋಮವಾರ ಘೋಷಿಸಿದೆ,  ಕ್ರಿಶ್ಚಿಯನ್ ಆಗಿ ಮತಾಂತರಗೊಂಡಿರುವ ಅವರು ಪರಿಶಿಷ್ಟ ಸದಸ್ಯರಿಗೆ ಮೀಸಲಾದ ಸ್ಥಾನದಿಂದ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಎಂದಿದೆ.

2021 ರ ಚುನಾವಣೆಯಲ್ಲಿ ರಾಜಾ ವಿರುದ್ಧ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ ಕುಮಾರ್ ಸಲ್ಲಿಸಿದ ಮನವಿಯ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಈ ಆದೇಶ ಬಂದಿದೆ. ರಾಜಾ ಅವರು ಕ್ರಿಶ್ಚಿಯನ್ ಆಗಿದ್ದು, ಅವರು ಧರ್ಮ ಬದಲಾಯಿಸಿದ ನಂತರ ಎಸ್‌ಸಿ ಸಮುದಾಯಕ್ಕೆ ಸೇರಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿತ್ತು.

ಎಸ್‌ಸಿ ಸ್ಥಾನಮಾನವನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ ದಲಿತರಿಗೆ ವಿಸ್ತರಿಸಬಹುದೇ ಎಂಬ ಬಗ್ಗೆ ನ್ಯಾಯಾಂಗ ಮತ್ತು ಶಾಸಕಾಂಗವು ಪರಿಶೀಲಿಸುತ್ತಿರುವ ಸಂದರ್ಭದಲ್ಲಿ ಈ ಆದೇಶ ಬಂದಿದೆ.

 1950 ರ ಮೂಲ ಆದೇಶದ ಪ್ರಕಾರ ಹಿಂದೂಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಅವಕಾಶ ನೀಡಲಾಗಿದೆ. ಆದದೆ, ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ 1956 ರಲ್ಲಿ ಸಿಖ್ಖರನ್ನು ಮತ್ತು 1990 ರಲ್ಲಿ ಬೌದ್ಧರನ್ನು ಎಸ್‌ಸಿ ವರ್ಗಕ್ಕೆ ಸೇರಿಸಲು ತಿದ್ದುಪಡಿ ಮಾಡಲಾಯಿತು. ಈ ತಿದ್ದುಪಡಿಗಳ ಹೊರತಾಗಿಯೂ, ಹಿಂದುಳಿದ ಸಮುದಾಯಗಳನ್ನು ಎಸ್‌ಸಿ ವ್ಯಾಖ್ಯಾನದ ಅಡಿಯಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಮರೊಳಗೆ ಸೇರಿಸಲು ಯಾವುದೇ ನಿಬಂಧನೆಗಳನ್ನು ಮಾಡಲಾಗಿಲ್ಲ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top