ವಾರಣಾಸಿ: ವಿಶ್ವ ಕ್ಷಯರೋಗ ದಿನದ ಅಂಗವಾಗಿ ವಾರಣಾಸಿಯಲ್ಲಿ ನಡೆದ ಒನ್ ವರ್ಲ್ಡ್ ಟಿಬಿ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಬಿ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತ ಹಲವು ಹೊಸ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸಾರ್ವಜನಿಕ ಸಹಭಾಗಿತ್ವದ ಬಲದೊಂದಿಗೆ ಸರ್ಕಾರದ ನಿರಂತರ ಪ್ರಯತ್ನಗಳು ದೇಶದಲ್ಲಿ ಟಿಬಿ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಿದೆ ಎಂದರು.
ಟಿಬಿ ವಿರುದ್ಧದ ಹೋರಾಟದ ಸಾಧನೆಗಳ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಕ್ಷಯರೋಗ ಚಿಕಿತ್ಸೆಯಲ್ಲಿ ಬಳಸಲಾಗುವ ಶೇಕಡಾ 80 ರಷ್ಟು ಔಷಧಿಗಳು ಭಾರತದಲ್ಲಿಯೇ ತಯಾರಾಗುತ್ತಿವೆ. ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಮತ್ತು ರೋಗಿಗಳನ್ನು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ವಿವಿಧ ಯೋಜನೆಗಳ ಅಡಿಯಲ್ಲಿ 75 ಲಕ್ಷ ಟಿಬಿ ರೋಗಿಗಳ ಖಾತೆಗೆ 2000 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಕಳುಹಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ 24 ಲಕ್ಷ ಜನರು ಟಿಬಿಯಿಂದ ಬಳಲುತ್ತಿದ್ದಾರೆ ಮತ್ತು ಸುಮಾರು 94 ಸಾವಿರ ಜನರು ಈ ಕಾಯಿಲೆಯಿಂದ ಸಾಯುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ ನಂತರ, ಮಕ್ಕಳು ಮತ್ತು ವಿದೇಶದಲ್ಲಿರುವ ಭಾರತೀಯರು ಸೇರಿದಂತೆ ಸಾವಿರಾರು ಸ್ವಯಂಸೇವಕರು ನಿ-ಕ್ಷಯ ಮಿತ್ರರಾಗಲು ಮುಂದೆ ಬಂದರು ಎಂದು ಅವರು ಹೇಳಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.