ನವದೆಹಲಿ: ಮೀಸಲಾತಿ ನಿಯಮಗಳ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.ಗುಜರಾತ್ನಲ್ಲಿ ನಡೆಯುತ್ತಿರುವ ಪಟೇಲ್ ಸಮುದಾಯದ ಪ್ರತಿಭಟನೆಯ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಮೀಸಲಾತಿಗಳನ್ನು ರಾಜಕೀಯ ಕಾರಣಕ್ಕಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದಿರುವ ಅವರು, ಮೀಸಲಾತಿಯ ಅಗತ್ಯ ಯಾರಿಗಿದೆ, ಎಷ್ಟು ಕಾಲದವರೆಗೆ ಇದೆ ಎಂಬುದನ್ನು ತಿಳಿದುಕೊಳ್ಳಲು ರಾಜಕೀಯೇತರ ಸಮಿತಿಯನ್ನು ರಚಿಸಬೇಕು ಎಂದು ಸಲಹೆ ನೀಡಿದ್ದಾರೆ.
‘ಪ್ರಜಾಫ್ರಭುತ್ವದಲ್ಲಿ ನಿರ್ದಿಷ್ಟ ಆಕಾಂಕ್ಷೆಗಳಿಗಾಗಿ ಹಿತಾಸಕ್ತಿ ಗುಂಪುಗಳನ್ನು ರಚಿಸಲಾಗಿದೆ. ಆದರೆ ಒಂದು ಗುಂಪಿನ ಆಕಾಂಕ್ಷೆಗಳ ಈಡೇರಿಕೆಗೆ ಇತರ ಗುಂಪುಗಳನ್ನು ಬಲಿಪಶು ಮಾಡಬಾರದು’ ಎಂದರು.
‘ಎಲ್ಲರ ಕಲ್ಯಾಣ ನಮ್ಮ ಅವಿಭಾಜ್ಯ ಗುರಿಯಾಗಿರಬೇಕು. ಆದರೆ ನನ್ನ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಅಡಕವಾಗಿದೆ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು. ಯಾವುದೇ ಹೋರಾಟ, ಪ್ರತಿಭಟನೆಗಳು ಆಗದಂತೆ ಸರ್ಕಾರ ಈ ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.