ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗಾಗಿ ಬಿಜೆಪಿ ಪರ ಕೆಲಸ ಮಾಡುತ್ತೇನೆ, ಅವರು ಹೇಳಿದ ಕಡೆ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.
“ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುವುದಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಇದೆ” ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸುದೀಪ್ ಅವರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿ ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳು, “ಹೆಸರಾಂತ ಚಿತ್ರನಟ ಕಿಚ್ಚ ಸುದೀಪ್ ಅವರು ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ, ನನಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ, ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅವರನ್ನು ನಮ್ಮ ಪಕ್ಷದ ಪರ ಪ್ರಚಾರಕ್ಕೆ ಸಂಪೂರ್ಣವಾಗಿ ಬಳಸಿಕೊಂಡು, ಅವರ ಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.
ಹೆಸರಾಂತ ಚಿತ್ರನಟ @KicchaSudeep ಅವರು ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ, ನನಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ, ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅವರನ್ನು ನಮ್ಮ ಪಕ್ಷದ ಪರ ಪ್ರಚಾರಕ್ಕೆ ಸಂಪೂರ್ಣವಾಗಿ ಬಳಸಿಕೊಂಡು, ಅವರ ಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳುತ್ತೇವೆ.1/2 pic.twitter.com/veYgs9BmRX
— Basavaraj S Bommai (@BSBommai) April 5, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.