ನವದೆಹಲಿ: ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಅವರು ರಾಜ್ಯದಲ್ಲಿ ಸರ್ಕಾರದ ನಿಯಂತ್ರಣದಲ್ಲಿರುವ ಎಲ್ಲಾ ದೇವಾಲಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಅಸೆಂಬ್ಲಿಯಲ್ಲಿ ಕಾಂಗ್ರೆಸ್ನ ಸುದರ್ಶನ್ ಸಿಂಗ್ ಬಬ್ಲೂ ಅವರ ಪ್ರಶ್ನೆಗೆ ಉತ್ತರಿಸಿದ ಅಗ್ನಿಹೋತ್ರಿ, ವಿವಿಧ ದೇವಾಲಯಗಳಲ್ಲಿನ ಸಣ್ಣ ಸಣ್ಣ ಕಾಮಗಾರಿಗಳು ಭಾರಿ ವೆಚ್ಚವನ್ನು ಉಂಟುಮಾಡುತ್ತದೆ ಮತ್ತು ಅಪೇಕ್ಷಿತ ಫಲಿತಾಂಶಗಳನ್ನು ನೀಡುವುದಿಲ್ಲ. ಹೀಗಾಗಿ ಸರ್ಕಾರ ತನ್ನ ಅಧೀನದಲ್ಲಿರುವ ಎಲ್ಲಾ ದೇವಾಲಯಗಳನ್ನು ಮಾಸ್ಟರ್ ಪ್ಲಾನ್ ಅಡಿಯಲ್ಲಿ ವೆಷ್ಣೋದೇವಿ ಧಾಮದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಿದೆ ಎಂದಿದ್ದಾರೆ.
ಮಾತಾ ಚಿಂತಪೂರ್ಣಿ ದೇವಸ್ಥಾನದ ಸಂಕೀರ್ಣ ಅಭಿವೃದ್ಧಿಗೆ 7.32 ಕೋಟಿ ಬಿಡುಗಡೆ ಮಾಡಲಾಗಿದ್ದು, 5.46 ಕೋಟಿ ವೆಚ್ಚದಲ್ಲಿ 1,669 ಚದರ ಮೀಟರ್ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದರು.
ಇದರೊಂದಿಗೆ ಒಳಚರಂಡಿ, ನೀರು ಸರಬರಾಜು ಯೋಜನೆ ಮತ್ತು ವಸ್ತುಸಂಗ್ರಹಾಲಯಕ್ಕೆ ಕ್ರಮವಾಗಿ 16 ಕೋಟಿ ರೂ, 12.24 ಕೋಟಿ ರೂ ಮತ್ತು 11.21 ಕೋಟಿ ರೂ ಬಿಡುಗಡೆ ಮಾಡಲಾಗಿದ್ದು, ದೇವಸ್ಥಾನದಿಂದ ಮುಬಾರಕ್ಪುರ ರಸ್ತೆವರೆಗೆ ರಸ್ತೆ ಸೌಕರ್ಯ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಆಶಾಪುರಿ ದೇವಸ್ಥಾನ ಸೇರಿದಂತೆ ಪೂಜೆ ನಡೆಯದ ಎಲ್ಲಾ ದೇವಾಲಯಗಳಲ್ಲಿ ಸರ್ಕಾರವು ಅರ್ಚಕರನ್ನು ನೇಮಿಸುತ್ತದೆ ಎಂದು ಹೇಳಿದರು ಮತ್ತು 40 ದೇವಾಲಯಗಳು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಡಿಯಲ್ಲಿವೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.