ನವದೆಹಲಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಹೆದ್ದಾರಿಯ ಕನಸು ಮುಂದಿನ ವರ್ಷದ ಆರಂಭದ ವೇಳೆಗೆ ನನಸಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.
“ಕಾಶ್ಮೀರದಿಂದ ಕನ್ಯಾಕುಮಾರಿ ರಸ್ತೆ ನಮಗೆ ಕನಸಾಗಿತ್ತು. ರೋಹ್ಟಾಂಗ್ನಿಂದ ಲಡಾಖ್ವರೆಗೆ ನಾಲ್ಕು ಸುರಂಗಗಳನ್ನು ನಿರ್ಮಿಸಲಾಗುವುದು. ಲೇಹ್ನಿಂದ ಕಾರ್ಗಿಲ್ಗೆ ಬಂದು ಝೋಜಿಲಾ ಮತ್ತು ಝಡ್-ಮೋರ್ಹ್ ಸುರಂಗಗಳನ್ನು ಸೇರಲಾಗುತ್ತದೆ” ಎಂದಿದ್ದಾರೆ
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಂಸದೀಯ ಸಲಹಾ ಸಮಿತಿಯ ಎರಡನೇ ಸಭೆಯಲ್ಲಿ ಭಾಗವಹಿಸಲು ನಿತಿನ್ ಗಡ್ಕರಿ ಸೋಮವಾರ ಜಮ್ಮು-ಕಾಶ್ಮೀರಕ್ಕೆ ಬಂದಿದ್ದ ವೇಳೆ ಈ ಮಾಹಿತಿಯನ್ನು ನೀಡಿದ್ದಾರೆ.
“ಹೊಸ ರಸ್ತೆ ದೆಹಲಿ ಮತ್ತು ಚೆನ್ನೈ ನಡುವಿನ ದೂರವನ್ನು 1,312 ಕಿಲೋಮೀಟರ್ಗಳಷ್ಟು ಕಡಿಮೆ ಮಾಡುತ್ತದೆ. ಈ ಕನಸು 2024 ರ ಆರಂಭದ ವೇಳೆಗೆ ನನಸಾಗಲಿದೆ” ಎಂದು ಅವರು ಹೇಳಿದರು. 2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ರಸ್ತೆ ಮೂಲಸೌಕರ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಿತು ಅಂದಿನಿಂದ ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ 1.25 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಕೈಗೊಂಡಿದ್ದೇವೆ, ಈ ಯೋಜನೆಗಳು ಪೂರ್ಣಗೊಂಡ ನಂತರ, ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸಿಗರ ಭೇಟಿ ನಾಲ್ಕು ಪಟ್ಟು ಹೆಚ್ಚಾಗುತ್ತದೆ. ಜನರು ಸ್ವಿಟ್ಜರ್ಲೆಂಡ್ಗೆ ಹೋಗುತ್ತಾರೆ, ಆದರೆ ನಮ್ಮ ಜಮ್ಮು-ಕಾಶ್ಮೀತ ಹೆಚ್ಚು ಸುಂದರವಾಗಿದೆ” ಎಂದು ಗಡ್ಕರಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಆಡಳಿತವು ಪ್ರವಾಸಿಗರಿಗೆ ರಸ್ತೆಬದಿಯ ಸೌಲಭ್ಯಗಳನ್ನು ಕಲ್ಪಿಸಲು 13 ಎಕರೆ ಭೂಮಿಯನ್ನು ಗುರುತಿಸಿದೆ ಎಂದು ಗಡ್ಕರಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.