ಬೆಂಗಳೂರು: ಕಾಂತಾರ ಸಿನಿಮಾದ ನಾಯಕ ರಿಷಭ್ ಶೆಟ್ಟಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದಾರೆ. ರಿಷಬ್ ಬಿಜೆಪಿ ಪರ ಪ್ರಚಾರ ಮಾಡುತ್ತಾರೆಯೇ ಎಂಬ ಕುತೂಹಲವನ್ನೂ ಕೂಡ ಮೂಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ರಿಷಬ್ ಶೆಟ್ಟಿ ನಮ್ಮ ಸಿದ್ದಾಂತಕ್ಕೆ ಹತ್ತಿರ ಇದ್ದವರು. ನಮ್ಮ ಸಿದ್ದಾಂತ ಪ್ರತಿಪ್ರಾದನೆ ಮಾಡಿದವರು” ಎಂದಿದ್ದಾರೆ. ಈ ಮೂಲಕ ರಿಷಭ್ ಶೆಟ್ಟಿ ಬಿಜೆಪಿ ಪರವಾಗಿ ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂಬ ಸುಳಿವನ್ನು ಬೊಮ್ಮಾಯಿ ನೀಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಂತಿಮ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ಕೊಲ್ಲೂರು ಮೂಕಾಂಬಿಕಾ ಸನ್ನಿಧಿ ಬೇಟಿ ಮಾಡಿ ಮೂಕಾಂಬಿಕಾ ದೇವಿಯಲ್ಲಿ ಕನ್ನಡ ಜನರ ಸುಭೀಕ್ಷೆಗಾಗಿ ಬೇಡಿಕೊಂಡಿದ್ದೇನೆ. ನವ ನಾಡು ಜನರಿಗೆ ಒಳ್ಳೆಯದಾಗಲಿ ಅಂತ ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.
ಬಂಡಾಯದ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ಸಮೀಕ್ಷೆಯ ವರದಿಯ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಟಿಕೆಟ್ ಕೈ ತಪ್ಪಿದವರೊಂದಿಗೆ ಮಾತನಾಡುವ ಮೂಲಕ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಅವರು ಸಂಯಮದಿಂದ ತೀರ್ಮಾನ ಮಾಡೋದು ಒಳ್ಳೆಯದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.