ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳೆದ ಕೆಲವು ವರ್ಷಗಳಿಂದ ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದಾರೆ. ಅವರು ಮುಖ್ಯಮಂತ್ರಿಯಾದ ನಂತರ ಬಿಜೆಪಿ ಅವರ ಚುನಾವಣಾ ಸಮಾವೇಶಗಳನ್ನು ಗಣನೀಯವಾಗಿ ಹೆಚ್ಚಿಸಿದೆ. ಆದಿತ್ಯನಾಥ್ ಅವರು ಮಾಫಿಯಾಗಳು ಮತ್ತು ಕ್ರಿಮಿನಲ್ಗಳ ವಿರುದ್ಧ ಕಠಿಣ ಕ್ರಮಗಳಿಗೆ ಜನಪ್ರಿಯರಾಗಿರುವ ಹಿನ್ನೆಲೆಯಲ್ಲಿ ಅವರ ಸ್ಟಾರ್ ವ್ಯಾಲ್ಯೂ ದಿನದಿಂದ ದಿನಕ್ಕೆ ವೃದ್ಧಿಸುತ್ತಲೇ ಇದೆ. ಇದೀಗ ಕರ್ನಾಟಕದಲ್ಲೂ ಅವರಿಗೆ ಸ್ಟಾರ್ ಪ್ರಚಾರಕನಾಗಲು ಎಲ್ಲಿಲ್ಲದ ಬೇಡಿಕೆಗಳು ಬರುತ್ತಿವೆ.
ಗುರುವಾರ ಗ್ಯಾಗ್ಸ್ಟರ್ ಅಸದ್ ಅಹ್ಮದ್ ಮತ್ತು ಗುಲಾಮ್ ಎನ್ಕೌಂಟರ್ ನಡೆದ ಬಳಿಕ ಸಿಎಂ ಆದಿತ್ಯನಾಥ್ ಅವರ ‘ಮಿಟ್ಟಿ ಮೆ ಮಿಲಾ ದೇಂಗೆ’ ಹೇಳಿಕೆಯನ್ನು ಒಳಗೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಾಂಟೆಡ್ ಕ್ರಿಮಿನಲ್ಗಳನ್ನು ನಿರ್ಮೂಲನೆ ಮಾಡುವ ಭರವಸೆಯನ್ನು ಈಡೇರಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು ಪ್ರಶಂಸಿಸಲಾಗುತ್ತಿದೆ. ಬಿಜೆಪಿ ನಾಯಕರು ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ವರದಿಗಳ ಪ್ರಕಾರ, ಪಕ್ಷದ ಕರ್ನಾಟಕ ಘಟಕವು ರಾಜ್ಯದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ಚುನಾವಣಾ ಸಮಾವೇಶಗಳ ಸಂಖ್ಯೆಯನ್ನು ಹೆಚ್ಚಿಸಲು ಬೇಡಿಕೆ ಇಡುತ್ತಿದೆ.
ವರದಿಯ ಪ್ರಕಾರ, ಕರ್ನಾಟಕ ಬಿಜೆಪಿ ನಾಯಕರು ಸಿಎಂ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆ ಮತ್ತು ಕಟ್ಟುನಿಟ್ಟಾದ ಇಮೇಜ್ನ ಲಾಭ ಪಡೆಯಲು ಬಯಸುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಅವರಿಂದ ಹೆಚ್ಚಿನ ಸಮಾವೇಶಗಳನ್ನು ನಡೆಸಲು ಬಯಸುತ್ತಿದ್ದಾರೆ. ಅದರಲ್ಲೂ ಅವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ಹಿಂದುತ್ವವು ಪ್ರಮುಖ ವಿಷಯವಾಗಿರುವುದರಿಂದ ಯೋಗಿಗೆ ಎಲ್ಲಿಲ್ಲದ ಬೇಡಿಕೆ ಬರುತ್ತಿದೆ.
ಆದರೆ ಅಂತಿಮವಾಗಿ ರಾಜ್ಯದಲ್ಲಿ ಯೋಗಿ ಅವರ ಎಷ್ಟು ಸಮಾವೇಶಗಳು ಆಯೋಜನೆಗೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಷ್ಟೇ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.