ಬೆಂಗಳೂರು: ಅಮೂಲ್ ವಿಚಾರಕ್ಕೆ ಕರ್ನಾಟಕದಲ್ಲಿ ಗದ್ದಲ ಎದ್ದಂತೆ ನೆರೆ ರಾಜ್ಯ ಕೇರಳದಲ್ಲಿ ನಂದಿನಿ ವಿಚಾರಕ್ಕೆ ಗದ್ದಲ ಎದ್ದಿದೆ. ಗುಜರಾತ್ ಮೂಲದ ಅಮುಲ್ ಸಂಸ್ಥೆಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಿದ್ದಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು, ಅದೇ ರೀತಿ ಈಗ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ತನ್ನ ನಂದಿನ ಉತ್ಪನ್ನವನ್ನು ಕೇರಳದಲ್ಲಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಅಲ್ಲಿನ ಹಾಲು ಒಕ್ಕೂಟದಿಂದ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೆಲ ತಿಂಗಳ ಹಿಂದೆ ಕೆಎಂಎಫ್ ಮಲಪ್ಪುರಂ ಜಿಲ್ಲೆಯ ಮಂಜೇರಿ ಮತ್ತು ಕೊಚ್ಚಿಯ ವ್ಯಿಟ್ಟಿಲ್ಲದಲ್ಲಿ ಎರಡು ಹಾಲು, ಡೈರಿ ಉತ್ಪನ್ನಗಳ ಮಾರಾಟ ಮಳಿಗೆ ತೆರೆದಿದೆ. ಜೊತೆಗೆ ಇನ್ನೂ 100 ಫ್ರಾಂಚೈಸಿಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದಕ್ಕೆ ಕೇರಳ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟ’ (ಕೆಸಿಎಂಎಂಎಫ್)ನಿಂದ ವಿರೋಧಗಳು ವ್ಯಕ್ತವಾಗುತ್ತಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಸಿಎಂಎಂಎಫ್ ಅಧ್ಯಕ್ಷ ಕೆ.ಎಸ್.ಮಣಿ ಅವರು, “ಅನಾರೋಗ್ಯಕರ ಸ್ಪರ್ಧೆ ಏರ್ಪಡುತ್ತದೆ ಎಂಬ ಕಾರಣಕ್ಕಾಗಿಯೇ ಒಂದು ರಾಜ್ಯದ ಹಾಲು ಸಹಕಾರಿ ಒಕ್ಕೂಟಗಳು ಇನ್ನೊಂದು ರಾಜ್ಯಕ್ಕೆ ಪ್ರವೇಶ ಮಾಡಬಾರದು ಎಂಬ ಅಲಿಖಿತ ನಿಯಮವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹೀಗಾಗಿಯೇ ನಮ್ಮ ಬಳಿ ಹೆಚ್ಚುವರಿ ಹಾಲು ಇದ್ದರೂ ನಾವು ನೆರೆ ರಾಜ್ಯವನ್ನು ಪ್ರವೇಶ ಮಾಡಿರಲಿಲ್ಲ. ಹೀಗಿರುವಾಗ ಕೇರಳದಲ್ಲಿ ತನ್ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕೆಎಂಫ್ನ ನಿರ್ಧಾರ ಅನೈತಿಕ ಮತ್ತು ಸಹಕಾರ ತತ್ವಗಳಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.