ನವದೆಹಲಿ: ಪ್ರಚಾರದ ವೇಳೆ ನಡೆದ ಸ್ಫೋಟದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಯಾವುದೇ ಹಾನಿಯಾಗದಂತೆ ಪಾರಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಭಾರತವು ಎಲ್ಲಾ ಹಿಂಸಾಚಾರಗಳನ್ನು ಖಂಡಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, “ಜಪಾನ್ನ ವಕಾಯಾಮಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನನ್ನ ಸ್ನೇಹಿತ ಪಿಎಂ ಕಿಶಿಡಾ ಉಪಸ್ಥಿತರಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಅವರು ಸುರಕ್ಷಿತವಾಗಿದ್ದಾರೆ ಎಂಬುದು ಸಮಾಧಾನ ತಂದಿದೆ. ಅವರ ನಿರಂತರ ಯೋಗಕ್ಷೇಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತವು ಎಲ್ಲಾ ಹಿಂಸಾಚಾರಗಳನ್ನು ಖಂಡಿಸುತ್ತದೆ” ಎಂದಿದ್ದಾರೆ.
ಪಶ್ಚಿಮ ಬಂದರು ನಗರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಕಿಶಿಡಾ ಭಾಗವಹಿಸಿದ್ದ ವೇಳೆ ಯಾರೋ ಸ್ಫೋಟಕ ಸಾಧನವನ್ನು ಎಸೆದಿದ್ದರು. ನಂತರ ಕಿಶಿಡಾ ಅವರನ್ನು ಯಾವುದೇ ಹಾನಿಯಾಗದಂತೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Learnt of a violent incident at a public event at Wakayama in Japan where my friend PM @Kishida230 was present. Relieved that he is safe. Praying for his continued well-being and good health. India condemns all acts of violence.
— Narendra Modi (@narendramodi) April 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.