ಗಾಂಧಿನಗರ: ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ನಡುವೆ ಹೇಳಿಕೆ ನೀಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ದಕ್ಷಿಣ ರಾಜ್ಯ ಕರ್ನಾಟಕದಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.
”ನನ್ನ ದೃಷ್ಟಿಯಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ. ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡುತ್ತಲೇ ಇರುತ್ತೀರಿ. ಅಮುಲ್ ಏನನ್ನಾದರೂ ಕಸಿದುಕೊಳ್ಳುತ್ತಿದ್ದರೆ ಆಗ ಮಾತ್ರ ಅದು ಪ್ರತಿಭಟನೆಯ ವಿಷಯವಾಗುತ್ತದೆ” ಎಂದು ಪಟೇಲ್ ಸೋಮವಾರ ಹೇಳಿದ್ದಾರೆ.
ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಅಮುಲ್ ವಿಷಯದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಮುಗಿ ಬೀಳುತ್ತಿವೆ. ದಕ್ಷಿಣ ರಾಜ್ಯದಲ್ಲಿ ಅಮುಲ್ಗೆ ಅವಕಾಶ ನೀಡುವ ಮೂಲಕ ಬಿಜೆಪಿ ನಂದಿನಿಯನ್ನು ಕೊಲ್ಲಲು ಬಯಸಿದೆ ಎಂದು ಆರೋಪಿಸಿವೆ. ಅಮುಲ್ಗೆ ಮಾರುಕಟ್ಟೆಯನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಡಲು ನಂದಿನಿ ಉತ್ಪನ್ನಗಳ ಕೊರತೆಯನ್ನು ಸೃಷ್ಟಿಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸುತ್ತಿವೆ.
ಆದರೆ ಕರ್ನಾಟಕದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಆರೋಪವನ್ನು ನಿರಾಕರಿಸಿದ್ದು, ನಂದಿನಿಗೆ ಅಮುಲ್ನಿಂದ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.