ನವದೆಹಲಿ: ಅಂತರ್ಯುದ್ಧ ಪೀಡಿತ ಸುಡಾನ್ನಲ್ಲಿ ಕರ್ನಾಟಕದ 31 ಜನರು ಸಿಲುಕಿಕೊಂಡಿದೆ, ಅವರನ್ನು ಕರೆತರಲು ಸರ್ಕಾರ ಕ್ರಮಕೈಗೊಂಡಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಂಗಳವಾರ ತಿರುಗೇಟು ನೀಡಿದ್ದಾರೆ.
“ನಿಮ್ಮ ಟ್ವೀಟ್ಗೆ ಗಾಬರಿಯಾಯಿತು! ಅಪಾಯದಲ್ಲಿ ಜೀವಗಳಿವೆ; ರಾಜಕೀಯ ಮಾಡಬೇಡಿ. ಏಪ್ರಿಲ್ 14 ರಂದು ಹೋರಾಟ ಪ್ರಾರಂಭವಾದಾಗಿನಿಂದ, ಖಾರ್ಟೂಮ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸುಡಾನ್ನಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ”ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
“ಭದ್ರತಾ ಕಾರಣಗಳಿಗಾಗಿ ಅವರ ವಿವರಗಳು ಮತ್ತು ಸ್ಥಳಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ. ಅವರ ಚಲನ ವಲನ ಉಗ್ರ ಹೋರಾಟದಿಂದ ನಿರ್ಬಂಧಿಸಲ್ಪಟ್ಟಿದೆ. ಅವರಿಗೆ ಸಂಬಂಧಿಸಿದ ಸಂಕೀರ್ಣವಾದ ಭದ್ರತಾ ಸನ್ನಿವೇಶವನ್ನೂ ಕೂಡ ಗಣನೆಗೆ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಯಭಾರ ಕಚೇರಿಯು ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.
“ಅವರ ಪರಿಸ್ಥಿತಿಯನ್ನು ರಾಜಕೀಯಗೊಳಿಸುವುದು ನಿಮ್ಮ ಅತ್ಯಂತ ಬೇಜವಾಬ್ದಾರಿ ನಡೆಯಾಗಿದೆ. ಯಾವುದೇ ಚುನಾವಣಾ ಗುರಿಯು ವಿದೇಶದಲ್ಲಿರುವ ಭಾರತೀಯರಿಗೆ ಅಪಾಯವನ್ನುಂಟುಮಾಡುವುದನ್ನು ಸಮರ್ಥಿಸುವುದಿಲ್ಲ” ಎಂದು ಸಚಿವರು ಹೇಳಿದರು.
ಸಿದ್ದರಾಮಯ್ಯ ಟ್ವೀಟ್ನಲ್ಲಿ ಹಕ್ಕಿ ಪಿಕ್ಕಿ ಬುಡಕಟ್ಟು ಜನಾಂಗದ 31 ಸದಸ್ಯರು ಸುಡಾನ್ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುರಕ್ಷಿತವಾಗಿ ಮರಳುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
“ಕಳೆದ ಕೆಲವು ದಿನಗಳಿಂದ ಸುಡಾನ್ನಲ್ಲಿ ಹಕ್ಕಿ ಪಿಕ್ಕಿಗಳು ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅಂತರರಾಷ್ಟ್ರೀಯ ಏಜೆನ್ಸಿಗಳನ್ನು ತಲುಪಬೇಕು” ಎಂದಿದ್ದರು.
ಸುಡಾನ್ನಲ್ಲಿ ಸೇನೆ-ಅರೆಸೈನಿಕ ಘರ್ಷಣೆಯ ನಡುವೆ ಅಲೆದಾಡುವ ಬುಲೆಟ್ಗೆ ತಗುಲಿ ಆಲ್ಬರ್ಟ್ ಆಗಸ್ಟಿನ್ ಎಂಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದ. ಅವರು ಆಫ್ರಿಕನ್ ದೇಶದಲ್ಲಿ ದಾಲ್ ಗ್ರೂಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
Simply appalled at your tweet! There are lives at stake; don’t do politics.
Since the fighting started on April 14th, the Embassy of India in Khartoum has been continuously in touch with most Indian Nationals and PIOs in Sudan. https://t.co/MawnIwStQp
— Dr. S. Jaishankar (@DrSJaishankar) April 18, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.