ನವದೆಹಲಿ: ಯುದ್ಧ ಪೀಡಿತ ಸುಡಾನ್ನಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತದ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ, ಈ ಕಾರ್ಯಾಚರಣೆಗೆ ʼಆಪರೇಷನ್ ಕಾವೇರಿʼ ಎಂದು ಹೆಸರಿಸಲಾಗಿದೆ.
“ಸುಡಾನ್ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ ಕಾವೇರಿ ನಡೆಯುತ್ತಿದೆ. ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ಅನೇಕರು ದಾರಿಯಲ್ಲಿದ್ದಾರೆ. ನಮ್ಮ ಹಡಗುಗಳು ಮತ್ತು ವಿಮಾನಗಳು ಅವರನ್ನು ತವರಿಗೆ ಕರೆತರಲು ಸಜ್ಜಾಗಿವೆ. ಸುಡಾನ್ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಭಾರತೀಯ ವಾಯುಸೇನೆಯ C-130J ಜೆಡ್ಡಾದಲ್ಲಿ ಸ್ಟ್ಯಾಂಡ್ಬೈನಲ್ಲಿದೆ ಮತ್ತು INS ಸುಮೇಧಾ ತನ್ನ ಪ್ರಜೆಗಳನ್ನು ಸ್ಥಳಾಂತರಿಸಲು ಪೋರ್ಟ್ ಸುಡಾನ್ ತಲುಪಿದೆ. ವಿವಿಧ ರಾಷ್ಟ್ರಗಳಿಂದ 150 ಕ್ಕೂ ಹೆಚ್ಚು ಜನರು ಶನಿವಾರ ಸೌದಿ ಅರೇಬಿಯಾವನ್ನು ತಲುಪಿದ್ದಾರೆ. ಇಂದು ಮುಂಜಾನೆ, ಫ್ರಾನ್ಸ್ ಭಾರತೀಯ ಪ್ರಜೆಗಳು ಸೇರಿದಂತೆ 28 ದೇಶಗಳಿಂದ 388 ಜನರನ್ನು ಸ್ಥಳಾಂತರಿಸಿದೆ.
Operation Kaveri gets underway to bring back our citizens stranded in Sudan.
About 500 Indians have reached Port Sudan. More on their way.
Our ships and aircraft are set to bring them back home.
Committed to assist all our bretheren in Sudan. pic.twitter.com/8EOoDfhlbZ
— Dr. S. Jaishankar (@DrSJaishankar) April 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.