ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದಲ್ಲಿ ‘ಕೊಚ್ಚಿ ವಾಟರ್ ಮೆಟ್ರೋ’ಗೆ ಚಾಲನೆ ನೀಡಿದರು. ಇದು ದೇಶದ ಮೊದಲ ವಾಟರ್ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ವಾಟರ್ ಮೆಟ್ರೋ ಒಂದು ವಿಶಿಷ್ಟವಾದ ನಗರ ಸಮೂಹ ಸಾರಿಗೆ ವ್ಯವಸ್ಥೆಯಾಗಿದ್ದು, ಸಾಂಪ್ರದಾಯಿಕ ಮೆಟ್ರೋ ವ್ಯವಸ್ಥೆಯಂತೆಯೇ ಅದೇ ಅನುಭವ ಮತ್ತು ಪ್ರಯಾಣದ ಸುಲಭತೆಯನ್ನು ಹೊಂದಿದೆ. ಕೊಚ್ಚಿಯಂತಹ ನಗರಗಳಲ್ಲಿ ಇದು ತುಂಬಾ ಉಪಯುಕ್ತವಾಗಿದೆ.
ವಿಶ್ವ ದರ್ಜೆಯ ಕೊಚ್ಚಿ ವಾಟರ್ ಮೆಟ್ರೋ ಕೇರಳದ ಕನಸಿನ ಯೋಜನೆಯಾಗಿದ್ದು, ಕೊಚ್ಚಿ ಮತ್ತು ಸುತ್ತಮುತ್ತಲಿನ 10 ದ್ವೀಪಗಳನ್ನು 78 ಬ್ಯಾಟರಿ ಚಾಲಿತ ವಿದ್ಯುತ್ ಹೈಬ್ರಿಡ್ ದೋಣಿಗಳು ಮತ್ತು 38 ಟರ್ಮಿನಲ್ಗಳೊಂದಿಗೆ ಸಂಪರ್ಕಿಸುತ್ತದೆ. ರೂ 1,136.83 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಸ್ಥಾಪಿಸಲಾಗಿದೆ. ಮೊದಲ ಹಂತದಲ್ಲಿ 34,000 ಪ್ರಯಾಣಿಕರು ವಾಟರ್ ಮೆಟ್ರೋದಲ್ಲಿ ಪ್ರಯಾಣಿಸಬಹುದು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದು ರಾಜ್ಯದ ‘ಕನಸಿನ ಯೋಜನೆ’ ಎಂದು ಬಣ್ಣಿಸಿದ್ದಾರೆ.
#WATCH | Kerala: PM Narendra Modi along with Governor Arif Mohammed Khan, CM Pinarayi Vijayan and MP Shashi Tharoor arrives at Thiruvananthapuram Central railway station where he will be flagging off the Vande Bharat Express train. pic.twitter.com/i5eVgSSrl2
— ANI (@ANI) April 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.